Advertisement

ನಾನೂ ಸಿಎಂ ಹುದ್ದೆ ಆಕಾಂಕ್ಷಿ: ಎಂ.ಬಿ.ಪಾಟೀಲ

11:21 PM Apr 21, 2019 | Team Udayavani |

ವಿಜಯಪುರ: ರಾಜ್ಯದಲ್ಲಿ ಮತ್ತೂಮ್ಮೆ ಸಿದ್ದರಾಮಯ್ಯ ಅವರು ಸಿಎಂ ಆಗಲಿದ್ದು, ನಂತರ ನನ್ನ ಸರದಿ. ಸಿಎಂ ಆಗುವ ವಿಷಯದಲ್ಲಿ ನನಗೆ ಆಸೆ ಇದೆಯೇ ಹೊರತು ದುರಾಸೆ ಇಲ್ಲ ಎಂದು ಗೃಹ ಸಚಿವ ಡಾ| ಎಂ.ಬಿ.ಪಾಟೀಲ ಹೇಳಿದರು.

Advertisement

ಭಾನುವಾರ ಬಬಲೇಶ್ವರಲ್ಲಿ ಜೆಡಿಎಸ್‌ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ ಪರ ಪ್ರಚಾರ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ನೀಡಿದರೂ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಯ್ತು.

ಜನಾದೇಶದಕ್ಕೆ ನಾವು ತಲೆ ಬಾಗಬೇಕಾಯಿತು. ನನಗಿಂತ ಹಿರಿಯರಾದ ಸಿದ್ದರಾಮಯ್ಯ ಅವರು ಮತ್ತೂಮ್ಮೆ ರಾಜ್ಯದ ಸಿಎಂ ಆಗಲಿದ್ದು, ನಂತರ ನನ್ನ ಸರದಿ ಬರಲಿದೆ ಎಂದರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಸಿದ್ದರಾಮಯ್ಯ ನಂತರ ಸಿಎಂ ಆಗುವ ಆಸೆ ಇದೆ ಎಂದು ಎಂ.ಬಿ.ಪಾಟೀಲ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next