Advertisement

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಾನೂ ಕೈ ಟಿಕೆಟ್ ಆಕಾಂಕ್ಷಿ: ಎಚ್. ವಿಶ್ವನಾಥ್

12:55 PM Aug 05, 2023 | Team Udayavani |

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ. ನಾನು ಟಿಕೆಟ್ ಕೇಳೋಣ ಎಂದುಕೊಂಡಿದ್ದೇನೆ, ಮುಂದಿನ ದಿನಗಳಲ್ಲಿ ಏನಾಗುತ್ತದೆ ನೋಡೋಣ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್ತು ಸದಸ್ಯ ಎಚ್. ವಿಶ್ವನಾಥ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪವಾಗಿದೆ. ಅದು ಒಳ್ಳೆಯದೆ. ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು.

ಸತ್ಯಹರಿಶ್ಚಂದ್ರ ಸತ್ತ ಮೇಲೆ ಇಬ್ಬರೇ ಸತ್ಯಹರಿಶ್ಚಂದ್ರರು ಇರುವುದು. ಒಬ್ಬರು ಎಚ್.ಡಿ. ಕುಮಾರಸ್ವಾಮಿ, ಇಬ್ಬೊಬ್ಬರು ಬಸವರಾಜ ಬೊಮ್ಮಾಯಿ. ಇಬ್ಬರೂ ಮುಖ್ಯಮಂತ್ರಿ ಆಗಿದ್ದವರು.  ಆಗ ಮಾಡಿದ ಅದ್ವಾನಗಳನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ಕುಮಾರಸ್ವಾಮಿ ಅವರೇ ಆ ಪೆನ್ ಡ್ರೈವ್ ಏನಾಯ್ತು? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ. ಏನೇನು ಆರೋಪ ಮಾಡುತ್ತೀರಿ? ಆದರೆ ಯಾವುದನ್ನು ಸಾಬೀತು ಮಾಡಿದ್ದೀರಿ? ನೀವು ಮುಖ್ಯಮಂತ್ರಿ ಆಗಿದ್ದವರು. ಮಾತಿನಿಂದ ನಿಮ್ಮ ಘನತೆ ಕಡಿಮೆಯಾಗುತ್ತಿದೆ ಎಂದರು.

ಸರ್ಕಾರದ ವಿರುದ್ದ ಎಚ್ ಡಿಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಖಾಸುಮ್ಮನೆ ಆರೋಪ ಮಾಡುವುದಲ್ಲ. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಗೆ ಹೊಟ್ಟೆ ಉರಿ ತಡೆದುಕೊಳ್ಳಲು ಆಗುತ್ತಿಲ್ಲ. ಸಮ್ಮಿಶ್ರ ಸರ್ಕಾರ ಬರುತ್ತದೆ, ಸಿಎಂ ಆಗುತ್ತೇನೆಂದು ಕನಸು ಕಾಣುತ್ತಿದ್ದರು. ಕಿಂಗ್ ಮೇಕರ್ ಆಗುತ್ತೇನೆ, ಸಿಎಂ ಆಗುತ್ತೇನೆ ಎಂದುಕೊಂಡಿದ್ದರು. ಆದರೆ ಅವರ ಆಸೆ ಈಡೇರಲಿಲ್ಲ. ಹೀಗಾಗಿ ಹತಾಶರಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಶ್ವನಾಥ್ ಹೇಳಿದರು.

ಇದನ್ನೂ ಓದಿ:ತಾಂತ್ರಿಕ ದೋಷ: ರಾಂಚಿಗೆ ತೆರಳುತ್ತಿದ್ದ ವಿಮಾನ ದೆಹಲಿಗೆ ವಾಪಸ್… 24 ಗಂಟೆಯಲ್ಲಿ 2ನೇ ಘಟನೆ

Advertisement

ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ- ಟಿಎಸ್‌ಪಿ ಹಣ ಬಳಕೆ ವಿಚಾರವನ್ನು ಸಮರ್ಥನೆ ಮಾಡಿದ ವಿಶ್ವನಾಥ್, ಅಗತ್ಯ ಇರುವ ಕಡೆಗೆ ಅನುದಾನ ಬಳಸಿಕೊಳ್ಳಲು ಸರ್ಕಾರಕ್ಕೆ ಅನುವಂಶೀಯವಾದ ಅಧಿಕಾರ ಇದೆ. ಅದನ್ನೇ ಬಿಜೆಪಿ, ಜೆಡಿಎಸ್‌‌ನವರು ದೊಡ್ಡದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ದಲಿತರಿಗೆ ಏನು ಮಾಡಿದ್ದರು ಎಂದು ಪ್ರಶ್ನಿಸಿದರು.

ನಾನೂ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದೆ.  ಸಮ್ಮಿಶ್ರ ಸರ್ಕಾರದಲ್ಲಿ 12 ಸಚಿವ ಸ್ಥಾನ ಸಿಕ್ಕಿತ್ತು.  ಇದರಲ್ಲಿ 7 ಸಚಿವರು ಕುಮಾರಸ್ವಾಮಿ ಮನೆಯವರೇ ಆಗಿದ್ದರು.  ಬಂಡೆಪ್ಪ ಕಾಶಂಪೂರ್ ಒಬ್ಬ ಕುರುಬ, ಇನ್ನಿಬ್ಬರು ಲಿಂಗಾಯತರು. ಎರಡು ಸಚಿವ ಸ್ಥಾನ ಖಾಲಿಯೇ ಇತ್ತು. ದಲಿತರು ಹಾಗೂ ಮುಸ್ಲಿಮರಿಗೆ ಕೊಡಿ ಎಂದು ಕೇಳಿದ್ದೆ.  ಖಾಲಿ ಬಿಟ್ಟರೆ ಹೊರತು ದಲಿತರಿಗೆ ಸಚಿವ ಸ್ಥಾನ ಸಿಗಲಿಲ್ಲ. ಅಂಥವರು ಈಗ ದಲಿತರ ಉದ್ಧಾರದ ಬಗ್ಗೆ ಮಾತನಾಡುತ್ತಾರೆ ಎಂದರು.

ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನೊಂದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಹೋರಾಟ ವೀರೇಂದ್ರ ಹೆಗ್ಗಡೆ ವಿರುದ್ಧ ಅಲ್ಲ‌ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next