Advertisement

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಭೀಮಾನಾಯ್ಕ

06:50 AM Nov 24, 2018 | Team Udayavani |

ಹಗರಿಬೊಮ್ಮನಹಳ್ಳಿ: ಸಂಪುಟ ವಿಸ್ತರಣೆ ವೇಳೆ ಬಂಜಾರ ಸಮುದಾಯದ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಬಳಿ ಕೋರಲಾಗಿದೆ ಎಂದು ಶಾಸಕ ಭೀಮಾನಾಯ್ಕ ಹೇಳಿದರು. 

Advertisement

ಪಟ್ಟಣದಲ್ಲಿ ಶುಕ್ರವಾರ ಪಿಎಂಜಿಎಸ್‌ವೈ ಉಪ ವಿಭಾಗ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 6 ಶಾಸಕರಿದ್ದರೂ ಸಚಿವ ಸ್ಥಾನ ಸಿಕ್ಕಿಲ್ಲ. ತಾವೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು ಸಂಪುಟ ವಿಸ್ತರಣೆ ವೇಳೆ ಬಳ್ಳಾರಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವ ವಿಶ್ವಾಸವಿದೆ ಎಂದರು.

ಆರು ಶಾಸಕರಲ್ಲಿ  ಒಬ್ಬರಿಗಾದರೂ ಸ್ಥಾನ ನೀಡುವಂತೆ ಬಳ್ಳಾರಿಯಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಕೋರಲಾಗಿದೆ. ಸಂಪುಟದಲ್ಲಿ ಬಂಜಾರ ಸಮುದಾಯಕ್ಕೂ ಪ್ರಾತಿನಿಧ್ಯ ನೀಡುವಂತೆ ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next