Advertisement

ನಾನು ಜನರ ಕ್ಲರ್ಕ್‌,ಯಡಿಯೂರಪ್ಪ ಏನು?

12:10 AM Feb 16, 2019 | Team Udayavani |

ಹಾಸನ: ನಾನು ಯಾವುದೇ ಪಕ್ಷದ ಕ್ಲರ್ಕ್‌ ಅಲ್ಲ. ರಾಜ್ಯದ ಆರೂವರೆ ಕೋಟಿ ಜನರ ಕ್ಲರ್ಕ್‌ನಂತೆ ಕೆಲಸ ಮಾಡುತ್ತಿದ್ದೇನೆ. ಜನರ ಕೆಲಸವನ್ನು ಒಬ್ಬ ಕ್ಲರ್ಕ್‌ನಂತೆ ಮಾಡಲು ನನಗೆ ಹೆಮ್ಮೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರಿಗೆ ತಿರುಗೇಟು ನೀಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಆಳುವ ಪಕ್ಷದ ಅಧ್ಯಕ್ಷನಾಗಿ ಅಮಿತ್‌ ಶಾ ಅವರು
ಇಷ್ಟು ಹಗುರವಾಗಿ ಮಾತನಾಡಬಾರದು. ಅಮಿತ್‌ ಶಾ ಅವರು ಒಬ್ಬ ಮುಖ್ಯಮಂತ್ರಿಯನ್ನು ಕ್ಲರ್ಕ್‌ ಎಂದು ಟೀಕಿಸುವುದಾದರೆ ಅವರ ಪಕ್ಷದ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಏನು ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲವೇ?ಅಪರೇಷನ್‌ ಕಮಲ, ಶಾಸಕರ ಖರೀದಿ ಮಾಡುತ್ತಿರುವ ಅವರ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಅಮಿತ್‌ಶಾ ಅವರಿಗೆ ನೈತಿಕತೆ ಇದ್ದರೆ ಆಪರೇಷನ್‌ ಕಮಲದ ಬಗ್ಗೆ ಮಾತನಾಡಬೇಕಾಗಿತ್ತು. ಆ ಬಗ್ಗೆ ಮಾತನಾಡಲಾರದಷ್ಟು ಮುಜುಗರದ ಸ್ಥಿತಿಯಲ್ಲಿದ್ದಾರೆ ಎಂದು ಚುಚ್ಚಿದ ಕುಮಾರ ಸ್ವಾಮಿ, ಅಭಿವೃದ್ಧಿ  ವಿಷಯದಲ್ಲಿ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಮುಂದಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next