Advertisement

ಸಚಿವ ಸ್ಥಾನ ಸಿಗದಿರುವ ಅಸಮಾಧಾನವಿದೆ, ಅನಿವಾರ್ಯತೆಯೂ ಇದೆ: ಪರಣ್ಣ ಮುನವಳ್ಳಿ

04:44 PM Jan 13, 2021 | Team Udayavani |

ಕೊಪ್ಪಳ: ಜಿಲ್ಲೆಗೆ ಸಚಿವ ಸ್ಥಾನ ಸಿಗದೇ ಇರುವುದು ತುಂಬ ನೋವು ಇದೆ. ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನವೂ ಇದೆ. ಆದರೆ ಅನಿವಾರ್ಯದ ಪರಿಸ್ಥಿತಿಯಾಗಿದೆ ಎಂದು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಹೇಳಿದರು.

Advertisement

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೊಪ್ಪಳ ಜಿಲ್ಲೆಗೆ ಸಚಿವ ಸ್ಥಾನ ಕೊಡಿ ಎಂದು ಹಲವು ಬಾರಿ ಸಿಎಂಗೆ ಮನವಿ ಮಾಡಲಾಗಿತ್ತು. ಜಿಲ್ಲಾ ಪ್ರಾತಿನಿಧ್ಯ ಹಾಗೂ ಹಿರಿಯರ ಕೋಟಾದಡಿ ಸ್ಥಾನ ಕೊಡುವಂತೆ ಮನವಿ ಮಾಡಿದ್ದೆವು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದವರಿಗೆ ಸ್ಥಾನ ಕೊಟ್ಟಿದ್ದಾರೆ. ಹಾಗಾಗಿ ನಾವು ಸುಮ್ಮನಾಗಿದ್ದೇವೆ. ನಮಗೆ ಅತೃಪ್ತಿ, ಸಭೆ ಮಾಡುವ ಅಭ್ಯಾಸ ಇಲ್ಲ. ಮುಂದೆ 2-3 ತಿಂಗಳಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿ ಬಂದಿದೆ. ಆಗಲಾದರೂ ಜಿಲ್ಲೆಯ ಹಿರಿಯನಾದ ನನಗೆ ಸಚಿವ ಸ್ಥಾನ ಕೊಡಲಿ ಎಂದು ಮನವಿ ಮಾಡುವೆ ಎಂದರು.

ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ ತಿಪ್ಪರಲಾಗ ಹಾಕಿದ್ರೂ BJP ಅಧಿಕಾರಕ್ಕೆ ಬರುವುದಿಲ್ಲ: ಸಿದ್ದರಾಮಯ್ಯ

ಇನ್ನೂ ಯತ್ನಾಳ ಸಿಡಿ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಯಾವ ಸಿಡಿ ಎಂಬುದು ನನಗೆ ಗೊತ್ತಿಲ್ಲ ಎಂದರು

Advertisement

Udayavani is now on Telegram. Click here to join our channel and stay updated with the latest news.

Next