Advertisement

BJP: ನಾನು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಅಲ್ಲ: ಬೊಮ್ಮಾಯಿ

09:00 PM Jan 28, 2024 | Team Udayavani |

ಹಾವೇರಿ: ನಾನು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಅಲ್ಲ. ಬಹಳ ಸ್ಪಷ್ಟವಾಗಿ ಹೇಳಿದ್ದೇನೆ. ನಾನು ಅಪೇಕ್ಷಿತ ಅಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಮೊದಲು ಬಿಜೆಪಿಯಲ್ಲಿದ್ದವರು. ಸಹಜವಾಗಿಯೇ ಅವರು ಪ್ರಧಾನಿ ಮೋದಿ ಬಗ್ಗೆ ಮೆಚ್ಚುಗೆಯ ಮಾತು ಹೇಳಿರುತ್ತಾರೆ. ದಲಿತರು ಎಲ್ಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ದಲಿತರಿಗೆ ನ್ಯಾಯ ಒದಗಿಸಿದ್ದೇ ನಾವು.

Advertisement

ನಾನು ಆಡಳಿತ ನಡೆಸುವಾಗ ದಲಿತರಿಗೆ ಯೋಜನೆಗಳನ್ನು ತಂದರೆ ಚುನಾವಣೆ ಸ್ಟಂಟ್‌ ಅಂದರು. ಆದರೆ, ನಾವು ಎಸ್‌ಸಿ, ಎಸ್‌ಟಿಯವರಿಗೆ ನ್ಯಾಯ ಒದಗಿಸಿದ್ದೇವೆ. ಶಿಕ್ಷಣ, ಉದ್ಯೋಗದಲ್ಲಿ ನಮ್ಮ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಈಗ ಅವರ ಸರ್ಕಾರ ಇದೆ. ಅವರು ಸಮಾವೇಶ ಮಾಡುತ್ತಿದ್ದಾರೆ. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಪಡೆದ ಲಾಭ ಈಗ ಪಡೆಯಲು ಆಗುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next