Advertisement

ಹೈಕಮಾಂಡ್‌ ಸಿಎಂ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ದನಿದ್ದೇನೆ: ಪರಂ!

03:11 PM Nov 17, 2018 | |

ಬೆಳಗಾವಿ: ನನಗೆ ಹೈಕಮಾಂಡ್‌ ಮುಖ್ಯಮಂತ್ರಿ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ದನಿದ್ದೇನೆ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಅಚ್ಚರಿ ಮೂಡಿಸಿದ್ದಾರೆ. ಈ ಹೇಳಿಕೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಇದೆ ಎನ್ನುವುದನ್ನು ಬಹಿರಂಗ ಪಡಿಸಿದೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ‘ನಾನು ಪಕ್ಷದ ಕೆಲಸವನ್ನು ಪ್ರಮಾಣಿಕವಾಗಿ ನಿರ್ವಹಿಸಿದ್ದೇನೆ. ಚುನಾವಣೆ ವೇಳೆ 2 ಬಾರಿ ಪಕ್ಷ ಮುನ್ನೆಡೆಸಿದ್ದೇನೆ.8 ವರ್ಷ ಅಧ್ಯಕ್ಷ ನಾಗಿ ಕೆಲಸ ಮಾಡಿದ್ದೇನೆ. ನನಗೆ ನಮ್ಮ  ಪಕ್ಷ  ಮುಖ್ಯಮಂತ್ರಿಯಾಗಿ ಜವಾಬ್ದಾರಿ ಕೊಟ್ಟರೆ ಆ ಕೆಲಸ ಮಾಡ್ತೇನೆ.ಇಷ್ಟೇ ಸಾಕು ಅಂದರೆ ಅಷ್ಟೇ ಸಾಕು.ಹೈಕಮಾಂಡ್‌ ತೀರ್ಮಾನ ಅಂತಿಮ’  ಎಂದರು. 

ಹೇಳಿಕೆ ಸಾಂದರ್ಭಿಕ ಅಷ್ಟೇ : ಸಿಎಂ!
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು  ಪ್ರತಿಕ್ರಿಯಿಸಿ ‘ಪರಮೇಶ್ವರ್‌ ಅವರು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ, ಬೇರೆ ವ್ಯಾಖ್ಯಾನ ಮಾಡುವುದು ಬೇಡ.ಅವರು ಸಾಂದರ್ಭಿಕವಾಗಿ ಹೇಳಿದ್ದಾರೆ ಅಷ್ಟೇ. ತಪ್ಪು ಅರ್ಥ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಮಖ್ಯಮಂತ್ರಿಯಾಗುವ ಅರ್ಹತೆಯುಳ್ಳವರು ಹಲವು ಮಂದಿ ಇದ್ದಾರೆ. ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತ ಅಲ್ಲ’ ಎಂದರು 

Advertisement

Udayavani is now on Telegram. Click here to join our channel and stay updated with the latest news.

Next