Advertisement

ಮಂಡ್ಯಕ್ಕೆ ನಾನೇಬಾಸ್‌: ಅಂಬರೀಶ್‌

10:28 AM Feb 03, 2018 | Team Udayavani |

ಮದ್ದೂರು: ಮಂಡ್ಯ ಜಿಲ್ಲೆಗೆ ನಾನೇ ಬಾಸ್‌, ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಾನೇ ಎಂದು ಶಾಸಕ ಅಂಬರೀಶ್‌ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅನ್ಯ ಪಕ್ಷಗಳಿಗೆ ವಲಸೆ ಹೋಗುವುದಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ರಾಷ್ಟ್ರೀಯ ಹಬ್ಬಗಳೂ ಸೇರಿ ಸಭೆ
ಸಮಾರಂಭಗಳಿಂದ ದೂರ ಉಳಿದಿದ್ದೆ ಎಂದು ಹೇಳಿದರು. 

Advertisement

ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಕಳೆದ ಮೂರೂವರೆ ವರ್ಷಗಳ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಿಲ್ಲೆಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಗೊಳಿಸಿದ್ದೇನೆ.
ಲೋಕೋಪಯೋಗಿ, ನೀರಾವರಿ ಸೇರಿ ಇನ್ನಿತರೆ ಇಲಾಖೆಗಳಿಗೂ ಹೆಚ್ಚಿನ ಅನುದಾನ ತಂದಿರುವುದಾಗಿ ಹೇಳಿದರು. ತನ್ನ ಸ್ಪರ್ಧೆ ಬಗ್ಗೆ ಜಿಲ್ಲೆಯಲ್ಲಿ ಕೆಲ ಊಹಾಪೋಹಗಳಿವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಪ್ರಚಾರ ಮಾಡುತ್ತಿರುವುದೆಲ್ಲ ಶುದ್ಧ ಸುಳ್ಳು ಎಂದು ಅಂಬರೀಶ್‌ ಸ್ಪಷ್ಟಪಡಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next