Advertisement

ಬಿಎಸ್‌ವೈ ವಿರುದ್ಧ ನಾನೇ ಕಾಂಗ್ರೆಸ್‌ ಅಭ್ಯರ್ಥಿ:ವರ್ತೂರ್‌ 

11:25 AM Sep 24, 2017 | Team Udayavani |

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ  ನಾನೇ ಕಾಂಗ್ರೆಸ್‌ ಅಭ್ಯರ್ಥಿ ಎಂದು ಪಕ್ಷೇತರ ಶಾಸಕ ವರ್ತೂರ್‌ ಪ್ರಕಾಶ್‌ ಭಾನುವಾರ ಹೇಳಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್‌’ಯಡಿಯೂರಪ್ಪ ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ  ಸ್ಪರ್ಧಿಸಲಿ ಅವರ ವಿರುದ್ಧ ನಾನೇ ಕಾಂಗ್ರೆಸ್‌ ಅಭ್ಯರ್ಥಿ’ ಎಂದರು. 

‘ಹೈಕಮಾಂಡ್‌ ನನಗೆ ಟಿಕೆಟ್‌ ಭರವಸೆ ನೀಡಿದ್ದು ಶೀಘ್ರದಲ್ಲೇ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದೇನೆ’ ಎಂದು ಪ್ರಕಾಶ್‌ ಹೇಳಿದರು. 

ಮೂಲ ಕಾಂಗ್ರೆಸಿಗರಾಗಿದ್ದ ವರ್ತೂರ್‌ ಪ್ರಕಾಶ್‌ 2008 ರಲ್ಲಿ ಬಂಡಾಯ ಅಭ್ಯರ್ಥಿಯಾಗಿ ಜಯ ಸಾಧಿಸಿದ್ದರು.ಬಿಜೆಪಿ ಸರ್ಕಾರದಲ್ಲಿ ಕೊನೆ ಕ್ಷಣದಲ್ಲಿ ಸಚಿವ ಸ್ಥಾನವನ್ನೂ ಪಡೆದಿದ್ದರು.  2014 ರಲ್ಲಿ ಮತ್ತೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next