Advertisement

ನಾನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

07:15 AM May 04, 2018 | Team Udayavani |

ಮದ್ದೂರು: “ಮುಂದೆ ಮುಖ್ಯಮಂತ್ರಿಯಾಗಲಿರುವ ಅಭ್ಯರ್ಥಿಗಳಲ್ಲಿ ನಾನೂ ಒಬ್ಬ’ ಎಂದು ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Advertisement

ಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ.ಮಾದೇಗೌಡ ಪರ ರೋಡ್‌ ಶೋ ನಡೆಸಿ ಮಾತನಾಡಿದ ಅವರು,  “ಕುಮಾರಣ್ಣ ಮುಖ್ಯಮಂತ್ರಿ ಆಗ್ತಾರೆ ಓಟ್‌ ಹಾಕಿ ಅಂತಾರೆ. ಹಾಗಾದ್ರೆ ನಾನೇನಿಲ್ವಾ.ನನಗೇನೂ ಬೇಡ್ವಾ’ ಎಂದು ಪ್ರಶ್ನಿಸಿದರು.

ದೇವೇಗೌಡರು ಮುಖ್ಯಮಂತ್ರಿಯಾಗಿದ್ದರು, ಪ್ರಧಾನ ಮಂತ್ರಿಯೂ ಆದರು. ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿದ್ದವರೇ. ಆದರೂ ಮಂಡ್ಯಕ್ಕೆ ಏನು ಮಾಡಿದ್ದಾರೆ ಅನ್ನೋದನ್ನು ಹೇಳಬೇಕಲ್ವಾ ಎಂದು ಜೆಡಿಎಸ್‌ ವರಿಷ್ಠರ ಬಗ್ಗೆ ವ್ಯಂಗ್ಯವಾಡಿದರು. ಇದೇನು ಪಂಚಾಯಿತಿ ಕೆಟ್ಟೋಯ್ತಾ. ನಾನೇ ಮುಖ್ಯಮಂತ್ರಿ ಅಂದ್ರೆ ಜನ ನಂಬುವಷ್ಟು ದಡ್ಡರಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next