Advertisement

ಮಾಧುಸ್ವಾಮಿ ಪರ ನಾನು ಕ್ಷಮೆ ಕೇಳುತ್ತೇನೆ : ಸಿ.ಎಂ ಬಿ.ಎಸ್. ಯಡಿಯೂರಪ್ಪ

10:15 AM Nov 20, 2019 | Suhan S |

ಬೆಂಗಳೂರು: ಹೊಸದುರ್ಗದ ಕಾಗಿನೆಲೆ ಶ್ರೀಗಳ ವಿಚಾರದಲ್ಲಿ ಕೊಟ್ಟ ಹೇಳಿಕೆಯಲ್ಲಿ ತಪ್ಪು ಗ್ರಹಿಕೆಯಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಸಚಿವ  ಮಾಧುಸ್ವಾಮಿ ಈಗಾಗಲೇ ಹೇಳಿದ್ದಾರೆ.  ಅವರ ಪರವಾಗಿ ನಾನು ಆ ಸಮಾಜದ ಬಂಧುಗಳಲ್ಲಿಕ್ಷಮೆ ಯಾಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸಚಿವ ಮಾಧುಸ್ವಾಮಿ ಹೇಳಿಕೆಯ ಕುರಿತು ಈಗಾಗಲೇ ಅವರು ಏನೇ ತಪ್ಪು ಗ್ರಹಿಕೆ ಇದ್ದರು ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಗೊಂದಲ, ಅಪಾರ್ಥಕ್ಕೆ ಎಡೆ ಮಾಡಿಕೊಡುವುದು ಬೇಡ. ಕನಕವೃತ್ತ ಎಂದು ಹೆಸರಿಡಲು ಮಾಧುಸ್ವಾಮಿ ಒಪ್ಪಿಗೆ ನೀಡಿದ್ದಾರೆ. ಇದನ್ನು ಇಲ್ಲಿಗೆ ಕೊನೆ ಮಾಡಬೇಕು ಎಂದು ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next