Advertisement

 ನನಗೆ ಡಿಸಿಎಂ ಸ್ಥಾನ ನೀಡುವಂತೆ ಸಿಎಂ ಬಳಿ ಕೇಳಿದ್ದೇನೆ : ಸಚಿವ ಶ್ರೀರಾಮುಲು

09:59 AM Feb 08, 2020 | Suhan S |

ಶಿವಮೊಗ್ಗ :  ಮಗಳ ಮದುವೆಗೆ ಕರೆಯಲು ಶಿವಮೊಗ್ಗಕ್ಕೆ ಆಗಮಿಸಿದ್ದೇನೆ. ಶಿವಮೊಗ್ಗದಲ್ಲಿರುವ ಆಪ್ತರು ಹಾಗೂ ಸ್ನೇಹಿತರನ್ನು ಮದುವೆಗೆ ಆಮಂತ್ರಿಸಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ನಗರದಲ್ಲಿ ಹೇಳಿದರು.

Advertisement

ಇದೇ ವೇಳೆಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತಾನಾಡಿದ ಅವರು, ರಾಜ್ಯದಲ್ಲಿ ಕರೋನ ವೈರಸ್ ಗೆ ಸಂಬಂಧಿಸಿದಂತೆ 97 ಜನರಿಗೆ ಕರೋನ ವೈರಸ್ ಟೆಸ್ಟ್ ಮಾಡಲಾಗಿದೆ. ಆದರೆ ಯಾರಲ್ಲಿಯೂ ಕರೋನ ವೈರಸ್ ಕಂಡು ಬಂದಿಲ್ಲ. ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ‌. ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿಯೂ ಹತ್ತು ಹಾಸಿಗೆಗಳ ವಿಶೇಷ ವಾರ್ಡ್ ಆರಂಭಿಸಲಾಗಿದೆ. ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುವುದು.  ಎಂದರು. ಈಗಾಗಲೇ ಹತ್ತು ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ.

ಮುಂದುವರೆದು ಮಾತಾನಾಡಿದ ಅವರು ,ಇನ್ನು ಕೆಲವರು ಮಂತ್ರಿ ಸ್ಥಾನಕ್ಕಾಗಿ ಒತ್ತಾಯ ಮಾಡುತ್ತಿದ್ದಾರೆ. ಪಕ್ಷದ ಮುಖಂಡರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ‌. ನನಗೆ ಡಿಸಿಎಂ ಸ್ಥಾನ ನೀಡುವಂತೆ ಸಿಎಂ ಬಳಿ ಕೇಳಿದ್ದೇನೆ. ಸಿಎಂ ಯಡಿಯೂರಪ್ಪ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಪದೇ ಪದೇ ಒತ್ತಡ ಹಾಕಿ ಯಡಿಯೂರಪ್ಪ ಅವರಿಗೆ ಮುಜುಗರ ಆಗುವಂತೆ ಮಾಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next