Advertisement

ರಾಜಕೀಯ ಬಿಕ್ಕಟ್ಟಿಗೂ ನನಗೂ ಸಂಬಂಧ ಇಲ್ಲ

06:15 AM Sep 15, 2018 | Team Udayavani |

ಬೆಳಗಾವಿ: “ರಾಜ್ಯ ರಾಜಕೀಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೂ, ನನಗೂ ಸಂಬಂಧ ಇಲ್ಲ’ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಯಾವ ಶಾಸಕರೂ ಬಿಜೆಪಿ ಜತೆ ಹೋಗುವುದಿಲ್ಲ. ಎಲ್ಲ ಸಮಸ್ಯೆಯೂ ಬಗೆಹರಿದಿದೆ ಎಂದರು.

Advertisement

“ಈಗ ನಡೆದಿರುವ ರಾಜಕೀಯ ಬೆಳವಣಿಗೆಗೂ, ನನಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ನನ್ನ ಪಾತ್ರವೂ ಇಲ್ಲ. ಹೀಗಾಗಿ, ಕಾಂಗ್ರೆಸ್‌ ವರಿಷ್ಠರು ನಮಗೆ ಎಚ್ಚರಿಕೆ ಕೊಡುವ ಪ್ರಶ್ನೆಯೇ ಇಲ್ಲ. ಸೆ.16ರಂದು ನಡೆಯಬಹುದಾದ ಬೆಳವಣಿಗೆಯ ಬಗ್ಗೆ ನನಗೆ ಗೊತ್ತಿಲ್ಲ’ ಎಂದು ಹೇಳಿದರು.

ಜಿಲ್ಲೆಯ ರಾಜಕಾರಣದಲ್ಲಿ ಹೊರಗಿನವರು ಪ್ರವೇಶ ಮಾಡಿದ್ದರಿಂದ ಸಮಸ್ಯೆ ಉಂಟಾಗಿತ್ತು. ಈಗ ಎಲ್ಲವೂ
ಬಗೆಹರಿದಿದೆ. ಏನೇ ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದ ನಾಯಕರು ಪರಿಹಾರ ನೀಡುತ್ತಾರೆ. ಮಾಸಾಂತ್ಯದಲ್ಲಿ ಸಂಪುಟ
ವಿಸ್ತರಣೆ ಆಗಲಿದ್ದು, ಆಗ ನಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next