Advertisement

ಮೋದಿಯವರ ಬಗ್ಗೆ ನನಗೆ ದ್ವೇಷವಿಲ್ಲ

06:55 AM Nov 11, 2018 | |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ಅಮಾನ್ಯ ಸಂದರ್ಭದಲ್ಲಿ ಐವತ್ತು ದಿನ ಸಮಯ ಕೊಡಿ, ನನ್ನ ಉದ್ದೇಶದಿಂದ ತೊಂದರೆ ಯಾದರೆ ಸಾರ್ವಜನಿಕವಾಗಿ ನೇಣಿಗೆ ಏರಿಸಿ ಎಂದು ಹೇಳಿದ್ದರು.

Advertisement

ಅದನ್ನೇ ನಾನು ಪುನರುಚ್ಚರಿಸಿದ್ದೇನೆ. ಆದರೆ, ಮೋದಿಯವರ ಬಗ್ಗೆ ಯಾವುದೇ ದ್ವೇಷ ಇಲ್ಲ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರಧಾನಿ ಮೋದಿ ಅವರು ನೋಟು ಅಮಾನ್ಯ ಮಾಡಿದ ಸಂದರ್ಭದಲ್ಲಿ 50 ದಿನ ಅವಕಾಶ ಕೊಡಿ ಇಲ್ಲದಿದ್ದರೆ, ನನ್ನನ್ನು ಜೀವಂತವಾಗಿ ಸುಟ್ಟುಬಿಡಿ ಎಂದು ಹೇಳಿದ್ದರು. ಎರಡು ವರ್ಷ ಕಳೆದರೂ ಅವರು ಆಶ್ವಾಸನೆ ನೀಡಿದಂತೆ ಏನೂ ಆಗಲಿಲ್ಲ. ಬದಲಿಗೆ ದೇಶದ ಆರ್ಥಿಕ ಸ್ಥಿತಿ ಆತಂಕಕಾರಿಯಾಗಿದೆ. ಸಾಮಾನ್ಯ ಜನರ ಖಾತೆಗೆ 15 ಲಕ್ಷ ರೂ. ಹಣ ಜಮೆಯೂ ಆಗಿಲ್ಲ. ಬದಲಾಗಿ ಮಧ್ಯಮ ವರ್ಗ ಹಾಗೂ ರೈತರಿಗೂ ಸಾಕಷ್ಟು ತೊಂದರೆಯಾಗಿದೆ. ಆ ಜನರ ನೋವನ್ನು ನಾನು ಮಾಧ್ಯಮಗಳ ಮೂಲಕ ವ್ಯಕ್ತಪಡಿಸಿದ್ದೇನೆ. ಯಾರಿಗೂ ನೋವುಂಟು ಮಾಡುವ ಉದ್ದೇಶ ನನಗಿಲ್ಲ. ಈ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಳ್ಳಬಾರದೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next