Advertisement

ಫೋನ್ ಕದ್ದಾಲಿಕೆ ಪ್ರಕರಣವನ್ನು ಟ್ರಂಪ್ ಗೆ ಬೇಕಾದರೂ ಕೊಡಲಿ,ನನಗೇನು ಭಯವಿಲ್ಲ: ಹೆಚ್ ಡಿಕೆ

10:13 AM Aug 19, 2019 | Team Udayavani |

ಸುಬ್ರಹ್ಮಣ್ಯ : ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗಾದರೂ ಒಪ್ಪಿಸಲಿ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರನ್ನಾದರರು ಕರೆಸಿ ತನಿಖೆ ಮಾಡಿಸಲಿ. ನನಗೇನು ಭಯವಿಲ್ಲ.ಇದೊಂದು ಸೇಡಿನ ರಾಜಕಾರಣದ ಭಾಗ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯಡಿಯೂರಪ್ಪ ವಿರುದ್ದ ಕಿಡಿಕಾರಿದರು.

Advertisement

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರವಿವಾರ ಆಗಮಿಸಿ ಶ್ರೀ ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ತಾನು ಯಾವುದೆ ಪೋನ್ ಕದ್ದಾಲಿಕೆಯಲ್ಲಿ ಭಾಗಿಯಾಗಿಲ್ಲ.ಆದರೂ ಅನಾವಶ್ಯವಾಗಿ ತನ್ನನ್ನು ಎಳೆದು ತರಲಾಗುತ್ತಿದೆ. ಅಂತವರಿಗೆ ಸುಬ್ರಹ್ಮಣ್ಯ ದೇವರೆ ಬುದ್ದಿ ನೀಡಲಿ ಎಂದರು. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವದಲ್ಲಿದ್ದಾಗ ನಡೆದಿತ್ತೆನ್ನಲಾದ ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಲು ತೀರ್ಮಾನಿಸಿರುವ ಹಿನ್ನಲೆಯಲ್ಲಿ ಅವರು ಈ ವಿಚಾರವನ್ನು ಸ್ಪಷ್ಟಪಡಿಸಿದರು.

ಮಾಜಿ ಸಚಿವ ಸಾರಾ ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ ಸದಾಶಿವ ಜತೆಗಿದ್ದರು

Advertisement

Udayavani is now on Telegram. Click here to join our channel and stay updated with the latest news.

Next