Advertisement

ಮತ್ತೆ ಸಿಎಂ ಆಗುವ ಆಸೆ ಇಲ್ಲ : ವಿಧಾನಸಭೆಯಲ್ಲಿ ಬಿಎಸ್ ವೈ ರೋಷದ ಮಾತು

12:43 PM Mar 11, 2022 | Team Udayavani |

ಬೆಂಗಳೂರು : ನನಗೆ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇಲ್ಲ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ನಾವು ಚುನಾವಣೆ ಎದುರಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Advertisement

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಅವರು, ನನ್ನನ್ನು ಯಾರೂ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿಲ್ಲ. ಸ್ವಯಂಪ್ರೇರಣೆಯಿಂದ ನಾನೇ ರಾಜೀನಾಮೆ ನೀಡಿದ್ದೇನೆ. ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಆಸೆ ನಮಗಿಲ್ಲ. ನಾನು ಆ ಹುದ್ದೆಯನ್ನು ನೋಡಿ ಆಗಿದೆ ಎಂದು ಹೇಳಿದರು.

ಬಸವರಾಜ್ ಬೊಮ್ಮಾಯಿ ಅವರ ಬಜೆಟ್ ಅನ್ನು ಹಿಡಿದುಕೊಂಡು ನಾವು ಜನರ ಬಳಿಗೆ ಹೋಗುತ್ತೇವೆ. ನೀವು ಬನ್ನಿ. ಯಾರು ಗೆಲ್ಲುತ್ತಾರೆ ಎಂಬುದನ್ನು‌ ನೋಡೋಣ ಎಂದು ಸವಾಲು ಹಾಕಿದರು.

ನನಗೆ ನಿಮ್ಮ ಸ್ಥಿತಿ‌ ನೋಡಿದರೆ ದುಃಖವಾಗುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳಿಪಟವಾಗುವುದರಲ್ಲಿ ಅನುಮಾನವೇ ಬೇಡ. ನೀವು ಮತ್ತೆ ವಿಪಕ್ಷ ನಾಯಕನಾದರೆ ಕಾಂಗ್ರೆಸ್ ಸೋಲುವುದು ನೂರಕ್ಕೆ ನೂರು ಸತ್ಯ ಎಂದು ಹೇಳಿದರು.

ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಉಸಿರಾಡುತ್ತಿದೆ. ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಗೆ ನಾಯಕರೇ‌ ಇಲ್ಲ.  ನಿಮ್ಮ‌ ಪಕ್ಷಕ್ಕೆ ಅಡ್ರೆಸ್ ಎಲ್ಲಿದೆ ? ಎಂದು ಪ್ರಶ್ನಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next