Advertisement

Prajwal ವಿದೇಶದಿಂದ ಬರುವ ವಿಚಾರ ನನಗೆ ಗೊತ್ತಿಲ್ಲ: ಎಚ್‌.ಡಿ. ರೇವಣ್ಣ

11:41 PM May 22, 2024 | Team Udayavani |

ಹೊಳೆನರಸೀಪುರ: ಜಿಲ್ಲೆ ಹಾಗೂ ತಾಲೂಕಿನ ಜನರ ಜತೆ ನಾನು, ದೇವೇಗೌಡರು, ಕುಮಾರಸ್ವಾಮಿ ಮತ್ತು ನಮ್ಮ ಕುಟುಂಬ ಇರುತ್ತದೆ. ಯಾರೂ ಧೃತಿಗೆಡಬೇಕಾದ ಪ್ರಮೇಯವಿಲ್ಲ ಎಂದು ಹೇಳಿದ ಮಾಜಿ ಸಚಿವ ಎಚ್‌.ಡಿ. ರೇವಣ್ಣ, ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ವಿಚಾರ ನನಗೆ ಗೊತ್ತಿಲ್ಲ ಎಂದರು.

Advertisement

ಪಟ್ಟಣದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ 22 ದಿನಗಳ ಬಳಿಕ ಭೇಟಿ ನೀಡಿ ಪೂಜೆ ಸಲ್ಲಿಸಿದ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ನ್ಯಾಯಾಲಯದ ಬಗ್ಗೆ ನನಗೆ ಗೌರವವಿದೆ. ದೇವರ ಮೇಲೆ ನಂಬಿಕೆ ಇದೆ ಎಂದರಲ್ಲದೆ, ನಾನು ಬದುಕಿರುವವರೆಗೂ ನನ್ನನ್ನು ನಮ್ಮ ಜನ ಕೈಬಿಡೋದಿಲ್ಲ ಎಂಬ ವಿಶ್ವಾಸ ನನಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next