Advertisement

ನನಗೆ ರೌಡಿಗಳ ಅವಶ್ಯಕತೆ ಇಲ್ಲ: ಸಂಸದ ಪ್ರತಾಪ್ ಸಿಂಹ

08:03 PM Dec 03, 2022 | Team Udayavani |

ಮೈಸೂರು: ”ಬೆತ್ತನಗೆರೆ ಶಂಕರ್ ನ ಬಗ್ಗೆ ನನಗೆ ಗೊತ್ತಿಲ್ಲ.ಪಕ್ಣ ಸೇರ್ಪಡೆಗೆ ಸಾವಿರಾರು ಜನರು ಬರುತ್ತಾರೆ.ಅವರ ಕುಂಡಲಿ, ಜಾತಕ ತೆಗೆದುಕೊಂಡು ನಾನು ಪರೀಕ್ಷೆ ಮಾಡಲು ಸಾಧ್ಯವಿಲ್ಲ” ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಟೀಕೆಯ ಕುರಿತು ಶನಿವಾರ ತಿರುಗೇಟು ನೀಡಿದ್ದಾರೆ.

Advertisement

ಸುದ್ದಿಗಾರರ ಜೊತೆ ಮಾತನಾಡಿದ ಪ್ರತಾಪ್ ಸಿಂಹ,”ಬಿಜೆಪಿ ನಾಯಕ ಅಪ್ಪಣ್ಣ ಅವರು ಎಚ್.ಡಿ‌ಕೋಟೆ ಭಾಗದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಂಡರು. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಆ ಕಾರ್ಯಕ್ರಮದಲ್ಲಿ ಶಾಲು ಹಾಕಿ ಕೆಲವರನ್ನು ಸ್ವಾಗತ ಮಾಡಿದೆ”ಎಂದರು.

”ನಾನು ಕೆಲಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿಲ್ಲ. ರೌಡಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ.ಪಾರ್ಟಿ ಹೇಳಿದ ಮೇಲೆ ಪಕ್ಷಕ್ಕೆ ಶಾಲು ಹಾಕಿ ಕರೆದುಕೊಂಡಿದ್ದೇನೆ” ಎಂದರು.

”ನನಗೆ ರೌಡಿಗಳ ಅವಶ್ಯಕತೆ ಇಲ್ಲ.ಆಯಿಲ್ ಕುಮಾರ್, ಕೊತ್ವಾಲ್, ಜಯರಾಜ್ ನ ಇಟ್ಟುಕೊಂಡು ರಾಜಕಾರಣ ಮಾಡಿದವರು ಯಾರು” ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next