Advertisement
ಟ್ವಿಟರ್ ಮೂಲಕ ಸಲಹೆಗಳನ್ನ ನೀಡುವ ಕೆಲಸ ಮಾಡ್ತಿದ್ದಾರೆ ಅವರು ಶಾಸಕಾಂಗ ಪಕ್ಷದ ನಾಯಕರು ಅವರೆ ಇಡೀ ರಾಜ್ಯದ ಕೆಲಸ ಮುಂದುವರಿಸುತ್ತಾರೆ. ನನ್ನ ಅವಧಿಯಲ್ಲಿ ಬೆಂಗಳೂರಿಗೆ, ರಾಜ್ಯಕ್ಕೆ ಏನು ಕೆಲಸ ಆಗಿದೆ. ಕುಮಾರಸ್ವಾಮಿ ಕಾಲದಲ್ಲಿ ಏನಾಗಿದೆ ಅಂತ ಮನೆ ಮನೆಗೂ ತಲುಪಿಸುವ ಕೆಲಸ ಆಗಬೇಕು. ಎಲ್ಲಾ ವಾರ್ಡ್ ಗಳ ಮುಖಂಡರನ್ನು ಭೇಟಿ ಮಾಡಿ ಚುನಾವಣೆ ಬರೋ ಮುಂಚೆ ಎಲ್ಲಾ ವಾರ್ಡ್ ನಲ್ಲಿ ಸಭೆ ಮಾಡ್ತೀವಿ.
ಇದನ್ನ ಸರಿ ಮಾಡೋ ಕೆಲಸ ಸರ್ಕಾರ ತಕ್ಷಣ ಮಾಡಬೇಕು ಎಂದರು.
Related Articles
ಸರ್ಕಾರ ಏನು ಮಾಡಿಲ್ಲ ಅಂತ ನಾನು ಹೇಳೊಲ್ಲ. ಆದರೆ ಇನ್ನು ಸಾಕಷ್ಟು ಕೆಲಸ ಮಾಡೋ ಅವಶ್ಯಕತೆ ಇದೆ. ಅರಸಿಕೆರೆ ತಾಲೂಕಿನಲ್ಲಿ ಸೋಂಕಿತರೊಬ್ಬರಿಗೆ ಖಾಸಗಿ ಆಸ್ಪತ್ರೆಯಲ್ಲಿ 4 ಲಕ್ಷ ಖರ್ಚಾಗಿದೆ ಅದೇ ಮನೆಯಲ್ಲಿ ತಾಯಿ, ಹೆಂಡತಿ, ತಂದೆಗೂ ಸೋಂಕು ಬಂದಿದೆ. ನಾನೇ ಮೆಡಿಕಲ್ ಅಧಿಕಾರಿಗಳಿಗೆ ಕರೆ ಮಾಡಿ ಕ್ರಮವಹಿಸಲು ಸೂಚನೆ ನೀಡಿದೆ.
Advertisement
ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಕರ್ಯಗಳ ಕೊರತೆ ಇದೆ ಹೀಗಾಗಿ ಖಾಸಗಿ ಆಸ್ಪತ್ರೆಗೆ ಹೋಗುವ ಘಟನೆ ಆಗುತ್ತಿದೆ ವ್ಯವಸ್ಥೆಯಲ್ಲಿ ಕೆಲ ದೋಷಗಳು ಇವೆ ಇದನ್ನ ಸರಿ ಮಾಡೋ ಕೆಲಸ ಸರ್ಕಾರ ಮಾಡಬೇಕು. ಕೇಂದ್ರದಿಂದ ಲಸಿಕೆ, ಔಷಧಿ, ವೆಂಟಿಲೇಟರ್ , ಆಕ್ಸಿಜನ್ ನಿಡೋದ್ರಲ್ಲಿ ಮಲತಾಯಿ ಧೋರಣೆ ತೋರಿದೆ ಅನ್ನುವ ವಿಚಾರ ಈ ಬಗ್ಗೆ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆಕುಮಾರಸ್ವಾಮಿ ಅವರು ಕೂಡಾ ಈ ಬಗ್ಗೆ ಅನೇಕ ಬಾರಿ ಮಾತಾಡಿದ್ದಾರೆ ಹಣಕಾಸು ಹಂಚಿಕೆಯಲ್ಲಿ ನಮಗೆ ಅನ್ಯಾಯ ಆಗಿದೆ
ಚಿಕ್ಕ ರಾಜ್ಯಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡ್ತಾರೆ. ನಮಗೆ ಕಡಿಮೆ ಹಣ ಬಿಡುಗಡೆ ಮಾಡಿದ್ದಾರೆ ಈ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಮೋದಿ ಅವರ ಕ್ಷೇತ್ರದಲ್ಲೂ ಸೋಂಕು ಹೆಚ್ಚಾಗಿದೆ ಸ್ವಲ್ಪ ಅವರು ಭಾವೋದ್ವೇಗಕ್ಕೆ ಒಳಗಾಗಿ ಮಾತಾಡಿದ್ದಾರೆ ಸೋಂಕು ಹೆಚ್ಚಳಕ್ಕೆ ಪಂಚ ರಾಜ್ಯಗಳ ಚುನಾವಣೆ ಕೂಡ ಕಾರಣವಾಗಿರಬಹುದು ಕೇಂದ್ರ ಸರ್ಕಾರದವರು 5 ರಾಜ್ಯಗಳ ಚುನಾವಣೆ ಕಡೆ ಹೆಚ್ಚು ಗಮನ ಕೊಟ್ಟರು. ಚುನಾವಣೆ ಹಿನ್ನಲೆ ಕೊರೊನಾ ಬಗ್ಗೆ ಗಮನ ಕೊಡಲಿಲ್ಲ. ಚುನಾವಣೆ ಬದಲು ಕೊರೊನಾ ಕಡೆ ಗಮನ ಕೊಟ್ಡಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ಹೀಗೆ ಆಗುತ್ತಿರಲಿಲ್ಲವೇನೋ ಚುನಾವಣೆ ಕೆಲಸದಿಂದ ಕೊರೊನಾ ಕೆಲಸದಲ್ಲಿ ಮೋದಿ ಅವರು ಸ್ವಲ್ಪ ನೆಗಲೆಟ್ ಮಾಡಿದ್ರು ಅಂತ ಎಲ್ಲರೂ ಮಾತನಾಡುತ್ತಿದ್ದಾರೆ ಹೀಗಾಗಿ ಈ ಬಾರಿ ಹೆಚ್ಚು ಸಮಸ್ಯೆ ಆಗೋದಕ್ಕೆ ಕಾರಣ ಆಗಿರಬಹುದು. ಚುನಾವಣೆಯಲ್ಲಿ ಗೆಲ್ಲಲೇ ಬೇಕು ಅಂತ ಪಣಕ್ಕೆ ಬಿದ್ರು. ಚುನಾವಣೆ ಗಮನದಲ್ಲಿ ಕೊರೊನಾ ನಿರ್ವಹಣೆ ಮರೆತ್ರು. ಮೋದಿ ವಿರುದ್ದ ದೇವೇಗೌಡರ ಕಿಡಿ. ಕುಮಾರಸ್ವಾಮಿ ಪ್ರತಿ ಹಂತದಲ್ಲೂ ಸರ್ಕಾರವನ್ನ ಎಚ್ಚರಿಸುವ ಕೆಲಸ ಮಾಡ್ತಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಬೀದಿಗಳಿದು ಹೋರಾಟ ಮಾಡೋ ಸ್ಥಿತಿ ಇಲ್ಲ ಆದ್ರೆ ಸರ್ಕಾರವನ್ನ ಎಚ್ಚರಿಸುವ ಕೆಲಸ ನಾವು ಮಾಡ್ತೀವಿ ಜೊತೆಗೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜನತೆಯ ಸಂಕಷ್ಟಕ್ಕೆ ನೆರವಾಗಬೇಕೆಂದು ಮಾಧ್ಯಮದವರ ಮುಖೇನ ಮನವಿ ಮಾಡುತ್ತೇನೆ