ಬೆಂಗಳೂರು: ಪೌರಾಡಳಿತ ಖಾತೆ ಬದಲಾವಣೆ ಮಾಡಿದ್ದಕ್ಕೆ ಬೇಸರವಾಗಿತ್ತು. ಆದರೆ ಅಂತಿಮವಾಗಿ ಸಿ.ಎಂ ಯಡಿಯೂರಪ್ಪ ಅನಿವಾರ್ಯ ಕಾರಣಗಳಿಂದ ಮತ್ತೆ ಖಾತೆ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದಿದ್ದು, ಮುಂದಿನ ದಿನಗಳಲ್ಲಿ ಬೇರೆ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದಾರೆ. ಹೀಗಾಗಿ ಸದ್ಯಕ್ಕೆ ನನಗೆ ಯಾವುದೇ ಅಸಮಧಾನ ಇಲ್ಲ ಎಂದು ಸಚಿವ ಆರ್ ಶಂಕರ್ ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ ಭೇಟಿ ನಂತರ ಮಾತನಾಡಿದ ಆರ್ ಶಂಕರ್, ಪೌರಾಡಳಿತ ಖಾತೆ ಬದಲಾವಣೆ ಮಾಡಿದ್ದಕ್ಕೆ ಬೇಸರವಾಗಿ, ಅದೇ ಖಾತೆ ಬೇಕು ಎಂದು ಸಿಎಂ ಬಳಿ ಪಟ್ಟು ಹಿಡಿದಿದ್ದೆ. ಆದರೇ ಈಗಿರುವ ತೋಟಗಾರಿಕೆ, ರೇಷ್ಮೆ ಖಾತೆಯಲ್ಲೆ ಮುಂದುವರೆಯುವಂತೆ ಯಡಿಯೂರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ನನಗೆ ಮತ್ತೆ ಖಾತೆ ಬದಲಾಯ್ತಾ? ಯಾವುದು ತೆಗೆದು, ಯಾವುದು ಕೊಟ್ರು?: ಮಾಧುಸ್ವಾಮಿ ಅಚ್ಚರಿ
ಹೀಗಾಗಿ ಭರವಸೆಯಿಂದ ಇದೀಗ ಸಿಎಂ ಮಾತಿಗೆ ಒಪ್ಪಿ ಬಂದಿದ್ದೇನೆ. ಜೊತೆಗೆ ಜನವರಿ 26 ರಂದು ಧ್ವಜಾರೋಹಣ ಆದ ನಂತರ ಹಾವೇರಿ ಜಿಲ್ಲಾ ಉಸ್ತುವಾರಿ ಕೊಡುವುದಾಗಿ ಭರವಸೆ ಕೂಡ ನೀಡಿದ್ದಾರೆ. ಸಿಎಂ ಮಾತಿಗೆ ಬೆಲೆ ಕೊಟ್ಟು ಇವಾಗ ತೋಟಗಾರಿಕೆ, ರೇಷ್ಮೆ ಖಾತೆಯಲ್ಲೇ ಸಂತೋಷ ದಿಂದ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹಾನರ್ V40 5G ಸ್ಮಾರ್ಟ್ ಪೋನ್ ವೈಶಿಷ್ಟ್ಯತೆಗಳೇನು?