Advertisement

BJP; ಬೇಡಿಕೆಯಿಟ್ಟಿಲ್ಲ,ಪಕ್ಷ ಬಯಸಿದರೆ ಸ್ಪರ್ಧಿಸುತ್ತೇನೆ: ಸಿ.ಟಿ.ರವಿ

06:26 PM Feb 23, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಬಯಸಿದರೆ ನಾನು ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ನಾನು ಸ್ಪರ್ಧಿಸುವುದಿಲ್ಲ. ಯಾವುದೇ ಬೇಡಿಕೆಯಿಟ್ಟಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಶುಕ್ರವಾರ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ” ನಾನು ಪಕ್ಷದಿಂದ ಏನನ್ನೂ ಕೇಳಿಲ್ಲ, ಪಕ್ಷದ ಆದೇಶದಂತೆ ನಡೆದುಕೊಂಡಿದ್ದೇನೆ, ಒಂದೇ ಗುರಿ ಇದ್ದು, ಮತ್ತೊಮ್ಮೆ ಮೋದಿ ಸರಕಾರ ರಚಿಸುವುದಾಗಿದೆ. ಬಿಜೆಪಿಯನ್ನು ಗೆಲ್ಲಿಸಲು, ನಾನು ಎಲ್ಲವನ್ನೂ ಮಾಡುತ್ತೇನೆ” ಎಂದರು.

ಉಡುಪಿ-ಚಿಕ್ಕಮಗಳೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರದಿಂದ ಸಿ.ಟಿ.ರವಿ ಅವರ ಹೆಸರು ಕೇಳಿ ಬಂದಿತ್ತು. ಉಡುಪಿ-ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮತ್ತೆ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದು, ಹಲವೆಡೆ ಬಿಜೆಪಿ ಕಾರ್ಯಕರ್ತರೇ ವಿರೋಧಿಸುತ್ತಿದ್ದಾರೆ ಮಾತ್ರವಲ್ಲದೆ ಮತದಾರರೂ ಬದಲಾವಣೆ ಬಯಸುತ್ತಿರುವುದು ಸಾಮಾಜಿಕ ತಾಣಗಳ ಮೂಲಕ ಬಹಿರಂಗವಾಗುತ್ತಿದೆ.

ಡಿ.ವಿ.ಸದಾನಂದ ಗೌಡ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಬಿಜೆಪಿ ಯಾರನ್ನು ಕಣ್ಣಕ್ಕಿಳಿಸುತ್ತದೆ ಅನ್ನುವ ಕುತೂಹಲವೂ ಮೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next