Advertisement

BJP Ticket; ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿ.ಟಿ ರವಿ

02:44 PM Jun 02, 2024 | Team Udayavani |

ಚಿಕ್ಕಮಗಳೂರು: 1995ರಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನು ಪಕ್ಷ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.

Advertisement

ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next