Advertisement

ಬೆದರಿಕೆ ಪತ್ರಕ್ಕೂ ನನಗೂ ಸಂಬಂಧವಿಲ್ಲ: ಆನಂದ ಸಿಂಗ್‌

10:35 PM Jan 20, 2020 | Team Udayavani |

ಹೊಸಪೇಟೆ: ಕೆಲ ಕಿಡಿಗೇಡಿಗಳು ನನ್ನ ನಕಲಿ ಸಹಿ ಮಾಡಿ ರಾಜ್ಯದ ವಿವಿಧೆಡೆ ಬೆದರಿಕೆ ಪತ್ರಗಳನ್ನು ರವಾನಿಸುತ್ತಿದ್ದು, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಶಾಸಕ ಆನಂದ ಸಿಂಗ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆಲ ಕಿಡಿಗೇಡಿಗಳು ನನ್ನ ಹೆಸರಿನ ನಕಲಿ ಸೀಲ್‌ ಬಳಸಿಕೊಂಡು ನಕಲಿ ಸಹಿ ಮಾಡಿ ರಾಜ್ಯದ ವಿವಿಧೆಡೆ ಪತ್ರ ರವಾನೆ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖಂಡನೀಯ.

Advertisement

ಸಮಾಜದ ಎಲ್ಲ ಕೋಮಿನವರನ್ನು ಸಮಾನವಾಗಿ ಕಾಣುವ ನಾನು ಶಾಸಕನಾಗಿ ಆಯ್ಕೆಯಾದ ನಂತರ ನನ್ನ ಕ್ಷೇತ್ರದಲ್ಲಿ ಇದುವರೆಗೂ ಯಾವುದೇ ಕೋಮು ಗಲಭೆಗಳಿಗೆ ಅವಕಾಶ ಕೊಟ್ಟಿಲ್ಲ. ಇಂಥ ಸಂದರ್ಭದಲ್ಲಿ ನನ್ನ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ, ಧರ್ಮ-ಧರ್ಮಗಳ ಮಧ್ಯೆ ಒಡಕನ್ನುಂಟು ಮಾಡಲು ಕಿಡಿಗೇಡಿಗಳು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ. ಇಂಥ ಕೃತ್ಯ ಮಾಡುತ್ತಿರುವವರನ್ನು ಪೊಲೀಸರು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next