Advertisement

ಸರ್ಕಾರಕ್ಕೆ ಕಂಟಕವಿದೆಯೇ? ಅಲ್ಲೊಬ್ಬ ಮೇಲಿದ್ದಾನೆ; HDK ಹೇಳಿದ್ದೇನು!

03:25 PM Dec 24, 2018 | Team Udayavani |

ಬಾಗಲಕೋಟೆ: ರಾಜ್ಯ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಇದರೊಂದಿಗೆ ಭಾರತೀಯ ಜನತಾ ಪಕ್ಷ ಕೂಡಾ ಬೆಳವಣಿಗೆ ಮೇಲೆ ಕಣ್ಣಿಟ್ಟಿದ್ದರೆ, ಮತ್ತೊಂದೆಡೆ ಸರ್ಕಾರದ ಅಳಿವು, ಉಳಿವಿನ ಪ್ರಶ್ನೆ ಬಗ್ಗೆ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.

Advertisement

ಸಂಪುಟದಲ್ಲಿ ಸಚಿವ ಕೈತಪ್ಪಿರುವುದಕ್ಕೆ ರಾಮಲಿಂಗಾರೆಡ್ಡಿ, ರಮೇಶ್ ಜಾರಕಿಹೊಳಿ, ಶಾಮನೂರು ಸೇರಿದಂತೆ ಕೆಲವು ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಸೋಮವಾರ ಈ ಬೆಳವಣಿಗೆ ಕುರಿತು ಕುಮಾರಸ್ವಾಮಿ ಅವರನ್ನು ತಮ್ಮ ವಿರುದ್ಧ ಮಾಸ್ಟರ್ ಫ್ಲ್ಯಾನ್ ನಡೆಸುತ್ತಿದ್ದಾರೆಯೇ ಎಂಬ ಸುದ್ದಿಗಾರರು ಪ್ರಶ್ನಿಸಿದಾಗ, ಅಲ್ಲೊಬ್ಬ ಮೇಲಿದ್ದಾನೆ, ಅವನೇನು ಮಾಡ್ಬೇಕು ಮಾಡುತ್ತಾನೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ತಂತ್ರಗಾರಿಕೆ ಮಾನವ ಸಹಜ ಪ್ರಕ್ರಿಯೆ. ನಾನ್ಯಾಕೆ ಈ ಬಗ್ಗೆ ಮಾತನಾಡ್ಲಿ. ಕಾಂಗ್ರೆಸ್ ಪಕ್ಷದ ತೀರ್ಮಾನಗಳ ಬಗ್ಗೆ ನನಗೆ ಮಿತಿಗಳಿವೆ. ಸಮಸ್ಯೆ, ಅಸಮಾಧಾನವನ್ನು ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಮುಖಂಡರು ಬಗೆಹರಿಸುತ್ತಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next