Advertisement

ಈ ಬಾರಿ ಉ.ಕರ್ನಾಟಕ ಭಾಗಕ್ಕೆ ಸಿಎಂ ಸ್ಥಾನ ಸಿಗುತ್ತದೆ, ಸಿಎಂ ಆಗುವ ಯೋಗ್ಯತೆ ನನಗಿದೆ: ಕತ್ತಿ

12:20 PM Jul 12, 2021 | Team Udayavani |

ಧಾರವಾಡ: ಬಿಜೆಪಿ ಪಾಳೆಯದಲ್ಲಿ ಸಿಎಂ ಬದಲಾವಣೆ ವಿಚಾರ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸಚಿವ ಉಮೇಶ ಕತ್ತಿ ಕೂಡ ಇದೀಗ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ್ದಾರೆ.

Advertisement

ಧಾರವಾಡದಲ್ಲಿ ಮಾತನಾಡಿದ ಅವರು, ನಾನೂ ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೆ ಇದೆ. ಯಾವುದೇ ಕಪ್ಪು ಚುಕ್ಕೆ ನನಗಿಲ್ಲ. ಮುಖ್ಯಮಂತ್ರಿಯಾಗಲು ಆಸೆ ನನಗೂ ಇದ್ದೇ ಇದೆ ಎಂದಿದ್ದಾರೆ.

ಇದನ್ನೂ ಓದಿ:ರಾಜಕೀಯಕ್ಕೆ ಶಾಶ್ವತ ಗುಡ್ ಬೈ ಹೇಳಿದ ರಜಿನಿಕಾಂತ್: ಮಕ್ಕಳ್ ಮಂದ್ರಂ ಪಕ್ಷ ವಿಸರ್ಜನೆ

ಸಿಎಂ ಬಳಿಕ ಪ್ರಧಾನಮಂತ್ರಿ ಆಗುವ ಆಸೆ ಇದ್ದೇ ಇರುತ್ತದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆದರೆ, ನಾನು ಉತ್ತರ ಕರ್ನಾಟಕದ ಜನರನ್ನು ಎಬ್ಬಿಸಬೇಕಾಗುತ್ತದೆ. ಈ ಭಾಗಕ್ಕೆ ಅನ್ಯಾಯ ಆದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕವಾಗಿ ಕಟ್ಟಬೇಕಾಗುತ್ತದೆ. ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಿಎಂ ಸ್ಥಾನ ಸಿಕ್ಕೇ ಸಿಗುತ್ತದೆ ಎಂದರು.

ಸಿದ್ದರಾಮಯ್ಯನವರ ಸರ್ಕಾರ 10% ಸರ್ಕಾರ ಎಂದು ರಾಜ್ಯದ ಜನರ ಮಾತನಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಹಾಗೆ ನಡೆದಿದ್ದರೆ ಕಾಂಗ್ರೆಸ್‌ ನವರು ಕೋರ್ಟ್‌ಗೆ ಹೋಗಲಿ ಎಂದ ಅವರು, ಶಾಸಕ ಅರವಿಂದ ಬೆಲ್ಲದ ಸಿಎಂ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲ್ಲದ ಯಾಕೆ ಸಿಎಂ ಆಗಬಾರದು? ನಾನೂ ಸಿಎಂ ಆಗಬಹುದು, ಬೆಲ್ಲದ ಅವರೂ ಸಿಎಂ ಆಗಬಹುದು ನಿರಾಣಿ ಅವರೂ ಸಿಎಂ ಆಗಬಹುದು ಎಂದು ಹೊಸ ಬಾಂಬ್ ಸಿಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next