Advertisement

ನನಗೆ ಸಿಎಂ ಸ್ಥಾನವೇ ಬೇಕು: ರಾಜು ಕಾಗೆ

11:03 PM Oct 18, 2019 | Lakshmi GovindaRaju |

ಚಿಕ್ಕೋಡಿ: “ನಾನೂ ಮುಖ್ಯಮಂತ್ರಿ ಆಕಾಂಕ್ಷಿ. ನನಗೂ ಮುಖ್ಯಮಂತ್ರಿ ಆಗುವ ಆಸೆಯಿದೆ’ ಎಂದು ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉಪಮುಖ್ಯಮಂತ್ರಿ ಹುದ್ದೆ ನನಗೆ ಬೇಡವೇ ಬೇಡ. ನಿಗಮ-ಮಂಡಳಿಯಂತೂ ಮೊದಲೇ ಬೇಡ. ಕೊಟ್ಟರೆ ರಾಜ್ಯವನ್ನು ಆಳುವ ಮುಖ್ಯಮಂತ್ರಿ ಹುದ್ದೆ ಕೊಡಲಿ. ಇಲ್ಲವಾದರೆ, ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ’ ಎಂದರು.

Advertisement

ಪ್ರತ್ಯೇಕ ರಾಜ್ಯಕ್ಕೆ ಬೆಂಬಲ: ಇದೇ ವೇಳೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕುರಿತಾದ ಮೇಶ್‌ ಕತ್ತಿ ಹೇಳಿಕೆಯನ್ನು ಬೆಂಬಲಿಸಿದ ಅವರು, “ಮೊದಲಿನಿಂದಲೂ ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ಹೀಗಾಗಿ, ಉಮೇಶ ಕತ್ತಿ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ. ಅದಕ್ಕೆ ನನ್ನ ಬೆಂಬಲವಿದೆ. ತೆಲಂಗಾಣ ಮತ್ತು ಛತ್ತೀಸಗಡ ಪ್ರತ್ಯೇಕ ರಾಜ್ಯಗಳಾಗಿವೆ. ನಮ್ಮಲ್ಲಿ ಏಕೆ ಬೇಡ? ಅಭಿವೃದ್ಧಿ ದೃಷ್ಟಿಯಿಂದ ಕರ್ನಾಟಕದಲ್ಲಿಯೂ ಕೂಡಾ ಪ್ರತ್ಯೇಕ ರಾಜ್ಯವಾಗುವುದು ಸಮಂಜಸವಾಗಿದೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next