Advertisement

ಯೋಧರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ; ಪ್ರಧಾನಿ ಮೋದಿ ಖಂಡನೆ 

01:41 PM Feb 14, 2019 | Team Udayavani |

ಹೊಸದಿಲ್ಲಿ : ಪುಲ್ವಾಮಾದ ಸಿಆರ್‌ಪಿಎಫ್ ಯೋಧರ ಮೇಲಿನ ಆತ್ಮಾಹುತಿ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಖಂಡಿಸಿದ್ದು,ಯೋಧರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. 

Advertisement

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲಿನ ದಾಳಿ ಹೇಯವಾದದ್ದು, ನಾನು ಈ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ವೀರ ಯೋಧರ ಪ್ರಾಣ ತ್ಯಾಗವನ್ನು ವ್ಯರ್ಥವಾಗಲು ಅವಕಾಶ ನೀಡುವುದಿಲ್ಲ. ಇಡೀ ದೇಶವೇ ಹುತಾತ್ಮ ವೀರ ಯೋಧರ ಕುಟುಂಬದೊಂದಿಗೆ ಹೆಗಲಿಗೆ ಹೆಗಲು ನೀಡುತ್ತಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಟ್ವೀಟ್‌ ಮಾಡಿದ್ದಾರೆ. 

ದಾಳಿಯ ಹಿನ್ನಲೆಯಲ್ಲಿ  ಗೃಹ ಸಚಿವ ರಾಜ್‌ನಾಥ್‌ ಸಿಂಗ್‌ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಇನ್ನೊಂದು ಟ್ವೀಟ್‌ ಮಾಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next