Advertisement

ನನ್ನ ಮನವಿಯನ್ನು ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇನೆ: ಆನಂದ್ ಸಿಂಗ್

03:04 PM Aug 24, 2021 | Team Udayavani |

ಬೆಂಗಳೂರು: ನಾನು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ನನ್ನ ನಿಲುವನ್ನು ಮತ್ತೊಮ್ಮೆ ಅವರ ಗಮನಕ್ಕೆ ತಂದಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದು ಸಚಿವ ಆನಂದ್ ಸಿಂಗ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಭಾವನಗೆಳಿಗೆ ಸಿಎಂ ಸ್ಪಂದಿಸಲಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರನ್ನು ಸಹ ಭೇಟಿ ಮಾಡಿದ್ದೇನೆ. ಅವರೂ ಸಹ‌ ಮೊದಲು ಅಧಿಕಾರ ವಹಿಸಿಕೊಳ್ಳುವಂತೆ ಹೇಳಿದ್ದಾರೆ. ನನ್ನ ಮನವಿಯನ್ನು ಅವರ ಗಮನಕ್ಕೂ ತಂದಿದ್ದೇನೆ ಎಂದರು.

ಇದನ್ನೂ ಓದಿ:ಖಾತೆ ಕ್ಯಾತೆ ಅಂತ್ಯ: ಸಿಎಂ ಭೇಟಿ ಬಳಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನ್ನ ಬೇಡಿಕೆ ಏನಿದೆಯೋ ಅದನ್ನು ಹೇಳಿದ್ದೇನೆ. ನನ್ನ ಮನವಿಯನ್ನು ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇನೆ. ಅದೆಲ್ಲವನ್ನು ನಿಮಗೆ ಹೇಳಬೇಕಾಗಿಲ್ಲ. ನನ್ನದು ಯಾವ ಬೀದಿ ನಾಟಕವೂ ಅಲ್ಲ ಎಂದು ಮಾಧ್ಯಮದವರ ಮೇಲೆ ಆನಂದ್ ಸಿಂಗ್ ಗರಂ ಆದರು.

Advertisement

Udayavani is now on Telegram. Click here to join our channel and stay updated with the latest news.

Next