Advertisement

ಸಾಲಮನ್ನಾ ಜವಾಬ್ದಾರಿ ಹೊರುವೆ

10:51 AM May 17, 2019 | Team Udayavani |

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಬಿ.ಎಸ್‌. ಯಡಿಯೂರಪ್ಪ ಅವರು ಛಬ್ಬಿ, ಅರಳಿಕಟ್ಟಿ, ಯಲಿವಾಳ, ಕಮಡೊಳ್ಳಿ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡರ ಪರ ಮತಯಾಚನೆ ಮಾಡಿದರು.

Advertisement

ಅರಳಿಕಟ್ಟಿ ಗ್ರಾಮದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ರೋಡ್‌ ಶೋ ನಡೆಸಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಹೋಗಿದೆ. ರೈತರ ಸಾಲ ಮನ್ನಾ ಸೇರಿದಂತೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಉತ್ತಮ ಆಡಳಿತ ನೀಡಬೇಕಾದವರು ಕಾಲಹರಣ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಈ ಸರಕಾರದ ಮೂಗು ಹಿಡಿದು ರೈತರ ಸಾಲ ಮನ್ನಾ ಮಾಡಿಸುವ ಜವಾಬ್ದಾರಿ ನಾನು ಹೊರುತ್ತೇನೆ ಎಂದರು. ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡರ, ಶಾಸಕ ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಎಂ.ಆರ್‌.ಪಾಟೀಲ, ಈರಣ್ಣಾ ಜಡಿ, ಶಿವು ಮೆಣಸಿನಕಾಯಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next