Advertisement

10 ದಿನಗಳಲ್ಲಿ ರಸ್ತೆ ಗುಂಡಿ ಮುಚ್ಚಿ; ಸಿಎಂ ಸಿದ್ದರಾಮಯ್ಯ ಸೂಚನೆ

01:29 PM Oct 09, 2017 | Sharanya Alva |

ಬೆಂಗಳೂರು: ರಾಜಧಾನಿಯ ರಕ್ಕಸ ಗುಂಡಿಗೆ ಬಿದ್ದು ದಂಪತಿ ಹಾಗೂ ಮಹಿಳೆಯೊಬ್ಬರು ಬಲಿಯಾದ ಬೆನ್ನಲ್ಲೇ ಉದ್ಯಾನನಗರಿಯಲ್ಲಿನ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಸೋಮವಾರ ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಆದೇಶ ರವಾನಿಸಿದ್ದಾರೆ.

Advertisement

ಇತ್ತೀಚೆಗೆ ಮೈಸೂರು ರಸ್ತೆಯ ಮೇಲ್ಸೇತುವೆ ಮೇಲೆ ಹೋಗುವ ರಸ್ತೆಯಲ್ಲಿ ಗುಂಡಿ ಕಾರಣದಿಂದ ದಂಪತಿ ಜೀವ ಕಳೆದುಕೊಂಡಿದ್ದರು. ಭಾನುವಾರ ರಸ್ತೆ ಗುಂಡಿ ತಪ್ಪಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಬೈಕ್ ಹಿಂಬದಿ ಕುಳಿತಿದ್ದ ನಾಗವಾರದ ನಿವಾಸಿ ರಾಧಿಕಾ(47) ಕೆಳಗೆ ಬಿದ್ದಿದ್ದು, ಅದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಇನ್ನು 10 ದಿನದೊಳಗೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next