Advertisement

Letter; ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು…: ದೇವರ ಹುಂಡಿಯಲ್ಲಿ ಹೀಗೊಂದು ಪತ್ರ

05:14 PM Aug 07, 2023 | Team Udayavani |

ಚಿಕ್ಕಮಗಳೂರು: “ತಾಯಿ…. ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು…! ನನ್ನ ಸೌಂದರ್ಯದ ಹೊಣೆ ನಿಮ್ಮ ಜವಾಬ್ದಾರಿ” ಹೀಗೆ ಬರೆದ ಪತ್ರವೊಂದು ಕಳಸದ ಕಳಸೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯಲ್ಲಿ ಸಿಕ್ಕಿದೆ.

Advertisement

ದೇವಸ್ಥಾನದ ಕಾಣಿಕೆ ಹುಂಡಿಯ ಹಣವನ್ನು ಅಧಿಕಾರಿಗಳು ಲೆಕ್ಕ ಮಾಡುವ ವೇಳೆ ಈ ಪತ್ರ ಪತ್ತೆಯಾಗಿದೆ.

ರಕ್ಷಿತ್ ಕೆ.ಆರ್ ಎಂಬಾತ ಗಿರಿಜಾ ದೇವಿಗೆ ಈ ಪತ್ರ ಬರೆದಿದ್ದು, “ನಾನು ಖ್ಯಾತ ನಟ, ಫ್ಯಾಷನ್ ಮಾಡೆಲ್ ಆಗಬೇಕು…!” ಎಂದು ಬೇಡಿಕೆ ಇಟ್ಟಿದ್ದಾನೆ.

“ಸರ್ವ ಸುಂದರಿಯಾದ ಗಿರಿಜಾದೇವಿಯಿಂದ ಆಶೀರ್ವಾದ ಬಯಸುತ್ತೇನೆ. ನನ್ನ ಕನಸನ್ನ ನನಸು ಮಾಡುವ ಜವಾಬ್ದಾರಿ ನಿಮ್ಮದು. ಈ ನಿನ್ನ ಭಕ್ತನ ಬೇಡಿಕೆ, ಪ್ರಾರ್ಥನೆಯನ್ನ ಈಡೇರಿಸು ತಾಯಿ” ಎಂದು ಬರೆದಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next