Advertisement

ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತೇನೆ: ರಾಜುಕಾಗೆ

02:05 PM Nov 13, 2019 | Suhan S |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಇದ್ದಿದ್ದಿದ್ರೆ ಇವತ್ತೇ ಕಾಂಗ್ರೆಸ್ ಸೇರ್ಪಡೆ ಆಗುತ್ತಿದೆ ಅವರು ಊರಲ್ಲಿಲ್ಲದ ಕಾರಣ ನಾಳೆ ಅಧಿಕೃತವಾಗಿ ಸೇರ್ಪಡೆಗೊಳ್ಳುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ರಾಜುಕಾಗೆ ಹೇಳಿದರು.

Advertisement

ಸಿದ್ದರಾಮಯ್ಯ ಭೇಟಿ‌ ಬಳಿಕ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಬಿಜೆಪಿಯಿಂದ ಹೊರ ಬಂದಿದ್ದೇನೆ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ.ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತೇನೆ 18ಕ್ಕೆ ಕಾಗವಾಡ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಕ್ಕೆ ಬಂದಿದ್ದೆ  ಬಿಜೆಪಿ ಸದಸ್ಯತ್ವಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಡುತ್ತೇನೆ. ಇದು ನನ್ನ 7 ನೇ ಚುನಾವಣೆ ಹೆಚ್ಚಿನ ಮತದಿಂದ ಗೆದ್ದು ಬರ್ತೆನೆ ಅನ್ನುವ ವಿಶ್ವಾಸ ಇದೆ.  ಯಾರು ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಜನ ಕಲಿಸುತ್ತಾರೆ.  ಸುಪ್ರೀಂ ತೀರ್ಪುನ್ನು ಸ್ವಾಗತಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next