Advertisement

ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ ಮಾಡುತ್ತೇನೆ: ಶೆಟ್ಟರ್ ಸ್ಪಷ್ಟನೆ

12:56 PM Oct 31, 2022 | Team Udayavani |

ಹುಬ್ಬಳ್ಳಿ: ಮುಂಬರುವ 2023ರ ಚುನಾವಣೆಯಲ್ಲಿ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಿಂದಲೇ ನಾನೇ ಸ್ಪರ್ಧಿಸುವೆ. ಮತ್ತೊಬ್ಬರನ್ನು ಕಣಕ್ಕೆ ಇಳಿಸುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ಪಷ್ಟಪಡಿಸಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಚುನಾವಣೆಯಲ್ಲಿ ಕೂಡ ನಾನು ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೇ ನಾನು ರಾಜ್ಯಪಾಲರಾಗಿ ಹೋಗುತ್ತೇನೆಂಬ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಇದೀಗ ಕೂಡ ಕೇಳಿ ಬರುತ್ತಿದೆ. ಅವೆಲ್ಲವೂ ಊಹಾಪೋಹ. ಮುಂಬರುವ ಚುನಾವಣೆಯಲ್ಲಿ ನಾನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದರು.

ಭ್ರಷ್ಟಾಚಾರ ಕುರಿತಂತೆ ಹಿಂದೆ ಆಡಳಿತ ನಡೆಸಿದ ಸರಕಾರಗಳ ತನಿಖೆಗೆ ಆಗ್ರಹಿಸಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಭ್ರಷ್ಟಾಚಾರ ತನಿಖೆ ಕುರಿತು ಲೋಕಾಯುಕ್ತದಲ್ಲಿ ದೂರು ಸಲ್ಲಿಕೆ ಆಗಿದೆ. ಅದರೊಟ್ಟಿಗೆ ಈ ಹಿಂದಿನ ಸರಕಾರಗಳಲ್ಲಿ ನಡೆದ ಭ್ರಷ್ಟಾಚಾರ ಕುರಿತು ತನಿಖೆಯಾಗಲಿ‌. ಅಲ್ಲದೇ ಸಿದ್ದರಾಮಯ್ಯ ತಮ್ಮಲ್ಲಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೆ ದೂರು ನೀಡಲಿ. ಅದು ಬಿಟ್ಟು ಸುಖಾಸುಮ್ಮನೆ ಆರೋಪ ಮಾಡುವುದು. ಹಿಟ್ ಆ್ಯಂಡ್ ರನ್ ಆರೋಪ ಮಾಡುವುದು ಸರಿಯಲ್ಲ ಎಂದು ಹರಿಹಾಯ್ದರು.

ಇದನ್ನೂ ಓದಿ:ಲವ್‌,ತಿರುಗಾಟ &.. ಪ್ರಿಯಕರನನ್ನು ದೂರ ಮಾಡಲು ಈಕೆ ಮಾಡಿದ್ದು ಖತರ್‌ ನಾಕ್ ಪ್ಲ್ಯಾನ್!

ಹು-ಧಾ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಮಹಾಪೌರರು ಪತ್ರ ಬರೆದಿರುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಆದಷ್ಟು ಬೇಗ ಅನುದಾನ ಸಿಗಲಿದೆ ಎಂದರು.

Advertisement

ಪತ್ರಕರ್ತರಿಗೆ ಉಡುಗೊರೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾದ ಬಗ್ಗೆ ನನಗೆ ಗೊತ್ತಿಲ್ಲ. ಉಡುಗೊರೆ ಪಡೆದು ಕೊಂಡವರಿದ್ದರೆ ಬೇಕಾದರೆ ದೂರು ಕೊಡಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next