Advertisement

ಉಸಿರಿರುವವರೆಗೆ ರೈತರ ಪರ ಹೋರಾಡುವೆ: ದೇವೇಗೌಡ

09:42 AM Nov 30, 2019 | Sriram |

ಕಿಕ್ಕೇರಿ: ನಾನು ಮಲಗುವ ವ್ಯಕ್ತಿಯಲ್ಲ, ನನ್ನ ಶಕ್ತಿಯೂ ಕುಂದಿಲ್ಲ. ನನ್ನ ಕೊನೆಯ ಉಸಿರಿರುವ ತನಕ ರೈತರ ಪರವಾಗಿ ಹೋರಾಟ ನಡೆಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಗುಡುಗಿದರು.

Advertisement

ಕೆ.ಆರ್‌.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ಬಿ.ಎಲ್‌.ದೇವರಾಜು ಪರ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಸೇರಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಹೊರಟಿವೆ. ಆದರೆ ಅದು ಅಷ್ಟು ಸುಲಭವಲ್ಲ. ಯಾರಿಂದಲೂ ಪ್ರಾದೇಶಿಕ ಪಕ್ಷಗಳನ್ನು ತುಳಿಯಲು ಸಾಧ್ಯವಿಲ್ಲ ಎಂದು ಹೇಳಿದರು.

ನಾನು ಸೋತರೂ ಪ್ರಚಾರಕ್ಕೆ ಬಂದು ಮತ ಕೇಳುತ್ತೇನೆ. ಅದರಲ್ಲಿ ನನಗೇನೂ ಅವಮಾನವಿಲ್ಲ.ನಾನು ಮನೆಯಲ್ಲಿ ಕೂರುವ ವ್ಯಕ್ತಿಯಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next