Advertisement

ಶಿವಮೊಗ್ಗ: ಜಿ.ಪಂ ಚುನಾವಣೆ ಒಳಗೆ ‘ಒಂದು ದೃಢ ನಿರ್ಧಾರ’ಮಾಡುತ್ತೇನೆ: ಮಧು ಬಂಗಾರಪ್ಪ

01:34 PM Mar 02, 2021 | Team Udayavani |

ಶಿವಮೊಗ್ಗ: ಕಳೆದ ಒಂದೂವರೆ ವರ್ಷದಿಂದ ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿದ್ದೆ. ಇವತ್ತು ನನ್ನ ಜನ್ಮದಿನ. ಇಂದಿನಿಂದ ಕೆಲ ಬದಲಾವಣೆಗಳನ್ನು ಮಾಡುವ ನಿರ್ಧಾರ ಮಾಡಿದ್ದೇನೆ. ಬದಲಾವಣೆ ಅನಿವಾರ್ಯವಾಗಿದ್ದು, ಈ ಸಂಬಂಧ ಚರ್ಚೆ ಮಾಡುತ್ತಿದ್ದೇನೆ. ಜಿಲ್ಲಾ ಪಂಚಾಯತ್ ಚುನಾವಣೆ ಒಳಗೆ ಒಂದು ದೃಢ ನಿರ್ಧಾರ ಮಾಡುತ್ತೇನೆ ಎಂದು ಜೆಡಿಎಸ್  ಯುವ ಮುಖಂಡ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.

Advertisement

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಣ್ಣನ ಜೊತೆ ನಾನು ತುಂಬಾ ಚೆನ್ನಾಗಿದ್ದೇನೆ.‌ ಬೇಗ ನಿರ್ಧಾರ ಮಾಡೋದು ಕಷ್ಟ. ಆದರೆ, ಪಕ್ಷದ ಕೆಲವು ವಿಚಾರಗಳನ್ನು ಗಮನಿಸಿದಾಗ ಬದಲಾವಣೆ ಅನಿವಾರ್ಯ ಎನ್ನಿಸುತ್ತಿದೆ ಎಂದರು.

ಇದನ್ನೂ ಓದಿ:ಕಾರ್ಮಿಕರ ಜೊತೆ ಚಹಾ ಎಲೆ ಬಿಡಿಸಿದ ಪ್ರಿಯಾಂಕಾ : ವಿಡಿಯೋ ನೋಡಿ!

ನನಗೆ  ಆಂತರಿಕ ಗೊಂದಲ, ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಆದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ನಡೆಸಿಕೊಂಡ ಬಗ್ಗೆ ನೋವಿದೆ ಎಂದು ಬೇಸರ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next