Advertisement

ನಾನು ಯಾವುದೇ ಕಾರಣಕ್ಕೂ ಮತ್ತೆ ಡಿಸಿಎಂ ಆಗುವುದಿಲ್ಲ: ಈಶ್ವರಪ್ಪ

11:00 AM Jan 09, 2020 | sudhir |

ಶಿವಮೊಗ್ಗ: ನಾನು ಯಾವುದೇ ಕಾರಣಕ್ಕೂ ಮತ್ತೆ ಡಿಸಿಎಂ ಆಗುವುದಿಲ್ಲ. ಅನೇಕರು ಈ ಹುದ್ದೆ ಬಯಸಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಮೊದಲು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ. ಏಕೆಂದರೆ ನಮಗೆ ಈಗಾಗಲೇ ಶಾಸಕರು ಹೆಚ್ಚಾಗಿ ಓವರ್‌ ಲೋಡ್‌ ಆಗಿದೆ. ನಮ್ಮ ಎಲ್ಲ ಶಾಸಕರು ಹುಲಿಗಳಿದ್ದಂತೆ. ಅವರನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

Advertisement

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪೌರತ್ವ ವಿಷಯದಲ್ಲಿ ಚರ್ಚೆ ನಡೆಯಲಿ. ಆದರೆ ಈ ವಿಷಯದಲ್ಲಿ ಯಾವುದೇ ಒಂದು ಸಮುದಾಯವನ್ನು ವೈಯಕ್ತಿಕವಾಗಿ ಗುರಿಯಾಗಿಟ್ಟುಕೊಂಡು ಮಾತನಾಡುವುದು ಸರಿಯಲ್ಲ.

ಇದರಿಂದಾಗಿ ಪ್ರಜಾಪ್ರಭುತ್ವದ ಆರೋಗ್ಯ ಹಾಳಾಗುತ್ತದೆ. ಸಿಎಎ ಈಗಾಗಲೇ ಲೋಕಸಭೆ, ರಾಜ್ಯಸಭೆಯಲ್ಲಿ ಅನುಮೋದನೆ ಪಡೆದು ರಾಷ್ಟ್ರಪತಿ ಅಂಕಿತ ಬಿದ್ದಿದ್ದು ಈಗ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಭಾರತ್‌ ಬಂದ್‌ ಸಹ ಸಿಎಎ ಮತ್ತು ಕೇಂದ್ರ ಸರಕಾರದ ವಿರುದ್ಧದ ಒಂದು ಪ್ರಯತ್ನ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next