Advertisement

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

10:11 PM Mar 16, 2024 | Team Udayavani |

ಕನಕಪುರ: ಕನಕಪುರ ಕ್ಷೇತ್ರದಲ್ಲಿ ಚುನಾವಣೆ ಉಸ್ತುವಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ. ಜೆಡಿಎಸ್‌- ಬಿಜೆಪಿ ಒಂದಾಗಿರುವುದರಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀವು ಊಹಿಸದಷ್ಟು ಹೀನಾಯವಾಗಿ ಸೋಲುತ್ತಾರೆಂದು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

Advertisement

ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ-ಜೆಡಿಎಸ್‌ ಒಂದಾದರೆ ಕಾಂಗ್ರೆಸ್‌ಗೆ ಅಸ್ತಿತ್ವವೇ ಇರುವುದಿಲ್ಲ. ಅದು ಡಿಕೆ ಸಹೋದರರಿಗೆ ಈಗಾಗಲೇ ಗೊತ್ತಾಗಿದೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬದಲಾವಣೆ ಆದರೂ ಆಶ್ಚರ್ಯವಿಲ್ಲ. ಚುನಾವಣೆ ನಂತರ ನಿಮ್ಮ ಮೇಲೆ ಕೇಸ್‌ ಹಾಕ್ತಾರೆ ಎಂಬ ಆತಂಕ. ಭಯ ಬೇಡ ಅದು ನಮಗೆ ಹೊಸದೇನೂ ಅಲ್ಲ. ಈ ಚುನಾವಣೆ ನಂತರ ನೂರಕ್ಕೆ ನೂರರಷ್ಟು ಈ ಸರ್ಕಾರ ಅಸ್ತಿತ್ವದಲ್ಲಿರುವುದಿಲ್ಲ. ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next