Advertisement

ಇನ್ನೂ ಹಲವು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುತ್ತೇನೆ: ಸಿಎಂ ಬೊಮ್ಮಾಯಿ

05:28 PM Oct 06, 2021 | Team Udayavani |

ಮೈಸೂರು: ನಾಳೆ ಮಾತ್ರ ಅಲ್ಲ, ಇನ್ನೂ ಹಲವು ಬಾರಿ ನಾನು ಚಾಮರಾಜ ನಗರಕ್ಕೆ ಭೇಟಿ ನೀಡುತ್ತೇನೆ, ಮುಖ್ಯಮಂತ್ರಿಗೆ ಎಲ್ಲಾ ಜಿಲ್ಲೆಗಳೂ ಒಂದೇ. ಅಲ್ಲಿಗೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.

Advertisement

ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವುದು ಸರಿಯಲ್ಲ.
ಅಲ್ಲಿ ಹೋಗದೆ ಇದ್ದವರಿಗೆ ಅಧಿಕಾರ ಶಾಶ್ವತವಾಗಿ ಉಳಿದಿದೆಯಾ ಎಂದು ಪ್ರಶ್ನಿಸಿದರು.

ನನಗೆ ಬೇರೆಯವರ ರೀತಿ ಯಾವುದೇ ಭಯ ಇಲ್ಲ, ಇದು ನಂಬಿಕೆ- ಅಪನಂಬಿಕೆ ಪ್ರಶ್ನೆ ಅಲ್ಲ. ಇದು ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯದ ಪ್ರಶ್ನೆ‌
ಆ ಕರ್ತವ್ಯವನ್ನ ನಾನು ಈಗ ಮಾಡುತ್ತಿದ್ದೇನೆ ಎಂದರು.

ದಸರಾ ನಿಮಿತ್ತ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಜೊತೆ ಕಂದಾಯ ಸಚಿವ ಆರ್.ಅಶೋಕ್ ಅವರೂ ಆಗಮಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್ ಅವರು ಸ್ವಾಗತ ನೀಡಿದರು. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಬಗಾದಿ ಗೌತಮ್, ಶಾಸಕರಾದ ಜಿಟಿ ದೇವೇಗೌಡ , ನಾಗೇಂದ್ರ, ಎಸ್.ಎ.ರಾಮದಾಸ್, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next