Advertisement

ಏಷ್ಯಾ ಕಪ್‌ ಕ್ರಿಕೆಟ್‌: ತನ್ನನ್ನು ಕೈಬಿಟ್ಟಿದ್ದನ್ನು ಧನಾತ್ಮಕವಾಗಿ ಯೋಚಿಸುವೆ: ಇಶಾನ್‌

11:05 PM Aug 12, 2022 | Team Udayavani |

ಪಾಟ್ನಾ: ಏಷ್ಯಾ ಕಪ್‌ ಕ್ರಿಕೆಟ್‌ ತಂಡದಿಂದ ತನ್ನನ್ನು ಕೈಬಿಟ್ಟಿದ್ದನ್ನು ಧನಾತ್ಮಕವಾಗಿ ಯೋಚಿಸುವುದಾಗಿ ವಿಕೆಟ್‌ ಕೀಪರ್‌-ಬ್ಯಾಟರ್‌ ಇಶಾನ್‌ ಕಿಶನ್‌ ಹೇಳಿದ್ದಾರೆ.

Advertisement

“ನನ್ನ ಪ್ರಕಾರ ಆಯ್ಕೆಗಾರರು ಸೂಕ್ತ ನಿರ್ಧಾರವನ್ನೇ ತೆಗೆದುಕೊಂಡಿದ್ದಾರೆ. ಆಯ್ಕೆಗೂ ಮುನ್ನ ಅವರು ಸುದೀರ್ಘ‌ ಚರ್ಚೆ ನಡೆಸಿದ್ದು, ಯಾರಿಗೆಲ್ಲ ಅವಕಾಶ ನೀಡಬೇಕು ಎಂಬ ಕುರಿತು ಗಂಭೀರವಾಗಿ ಚಿಂತಿಸಿದ್ದಾರೆ.

ನನ್ನನ್ನು ಆಯ್ಕೆ ಮಾಡಿಲ್ಲ. ಇದನ್ನು ನಾನು ಧನಾತ್ಮಕವಾಗಿ ಯೋಚಿಸುತ್ತೇನೆ. ನಾನಿನ್ನೂ ಕಠಿನ ಅಭ್ಯಾಸ ನಡೆಸಿ ಹೆಚ್ಚು ರನ್‌ ಗಳಿಸಬೇಕೆಂಬುದೇ ಇದರ ತಾತ್ಪರ್ಯ’ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next