Advertisement

Rajasthan; ಜಗಳ: ಐಎಎಸ್‌, ಐಪಿಎಸ್‌ ಅಧಿಕಾರಿ ಅಮಾನತು

08:00 PM Jun 14, 2023 | Team Udayavani |

ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯ ರೆಸ್ಟೋರೆಂಟ್‌ ಒಂದರಲ್ಲಿ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಒಬ್ಬ ಐಎಎಸ್‌, ಒಬ್ಬ ಐಪಿಎಸ್‌ ಅಧಿಕಾರಿ ಸೇರಿದಂತೆ ಒಟ್ಟು 5 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Advertisement

ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎರಡು ಗುಂಪು ಹೊಡೆದಾಡಿಕೊಂಡು, ಪರಸ್ಪರ ಕಲ್ಲು ಎಸೆಯುತ್ತಿರುವ ದೃಶ್ಯಗಳು ಸೆರೆಯಾಗಿವೆ.

ಘಟನೆ ಸಂಬಂಧ ಅಜ್ಮೀರ್ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ, ಐಎಎಸ್‌ ಅಧಿಕಾರಿ ಗಿರಿಧರ್‌, ಗಂಗಾಪುರ ನಗರ ವಿಶೇಷ ಕರ್ತವ್ಯಕ್ಕೆ ನೇಮಿಸಲಾಗಿದ್ದ ಐಪಿಎಸ್‌ ಅಧಿಕಾರಿ ಸುಶೀಲ್‌ ಕುಮಾರ್‌ ಬಿಷ್ಣಾಯ್‌, ಒಬ್ಬ ಕಾನ್ಸ್‌ಟೆಬಲ್‌ ಮತ್ತು ಇತರೆ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next