Advertisement

IAS ಅಧಿಕಾರಿ ಆಲೋಕ್‌ ಕುಮಾರ್‌ ವರ್ಗ

09:15 PM Sep 29, 2023 | Team Udayavani |

ಬೆಂಗಳೂರು: ಕೆಲವು ತಿಂಗಳ ಹಿಂದೆಯಷ್ಟೇ ಕಾನೂನು ಹಾಗೂ ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷಾ ವಿಭಾಗದ ಎಡಿಜಿಪಿ ಹುದ್ದೆಗೆ ವರ್ಗಾವಣೆಗೊಂಡಿದ್ದ ಆಲೋಕ್‌ ಕುಮಾರ್‌ ಅವರನ್ನು ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್‌ ಅವರಿಗೆ ಡಿಜಿಪಿಯಾಗಿ ಮುಂಭಡ್ತಿ ನೀಡಲಾಗಿದೆ.

Advertisement

ಆಲೋಕ್‌ ಕುಮಾರ್‌ ಅವರನ್ನು ಬೆಂಗಳೂರು ತರಬೇತಿ ಕೇಂದ್ರದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಹುದ್ದೆಯನ್ನು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ಆಡಳಿತದ ಕೇಡರ್‌ ಹುದ್ದೆಗೆ ಸ್ಥಾನಮಾನ ಮತ್ತು ಜವಾಬ್ದಾರಿಗಳಲ್ಲಿ ಸಮಾನವೆಂದು ಘೋಷಿಸಲಾಗಿದೆ.

ಡಾ| ಕೆ. ರಾಮಚಂದ್ರ ರಾವ್‌ಗೆ ಬಡ್ತಿ
ಕರ್ನಾಟಕ ರಾಜ್ಯ ಪೊಲೀಸ್‌ ಹೌಸಿಂಗ್‌ ಕಾರ್ಪೊರೇಷನ್‌ನ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ| ಕೆ.ರಾಮಚಂದ್ರ ರಾವ್‌ ಅವರು ಎಚ್‌ಎಜಿಯ ವೇತನ ಶ್ರೇಣಿಯನ್ನು ಹೊಂದಿರುವ ಪೊಲೀಸ್‌ ಮಹಾನಿರ್ದೇಶಕರ ದರ್ಜೆಯಲ್ಲಿ ಅಧಿಕಾರಿಯಾಗಿ ಭಡ್ತಿ ಪಡೆದಿದ್ದಾರೆ. ಈ ಹುದ್ದೆಯನ್ನು ಪೊಲೀಸ್‌ ಮಹಾನಿರ್ದೇಶಕರು, ಅಪರಾಧ ತನಿಖಾ ಇಲಾಖೆ, ಬೆಂಗಳೂರು ಕೇಡರ್‌ ಹುದ್ದೆಗೆ ಸಮಾನವಾದ ಸ್ಥಾನಮಾನ ಮತ್ತು ಜವಾಬ್ದಾರಿಗಳೆಂದು ಘೋಷಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next