Advertisement

ಐಎಎಸ್‌ ಪ್ರೊ. ಅಧಿಕಾರಿ ಮುಕುಲ್‌ ಜೈನ್‌ ಕರ್ತವ್ಯಕ್ಕೆ

12:35 AM Jul 11, 2023 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಐಎಎಸ್‌ ಪ್ರೊಬೇಷನರಿ ಅಧಿಕಾರಿಯಾಗಿ ನಿಯುಕ್ತಿಗೊಂಡಿರುವ ಮುಕುಲ್‌ ಜೈನ್‌ ಅವರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡರು.

Advertisement

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಮುಕುಲ್‌ ಅವರನ್ನು ಸ್ವಾಗತಿಸಿ, ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. 2022ರ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿರುವ ಮುಕುಲ್‌ ಜೈನ್‌ ಮೂಲತಃ ರಾಜಸ್ಥಾನದ ಆಲ್ವಾರ್‌ನವರು.

ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಬಿಟೆಕ್‌ ಪದವಿ ಪಡೆದಿದ್ದಾರೆ. ಅವರು 2021ರ ಬ್ಯಾಚ್‌ನ ಭಾರತೀಯ ಅರಣ್ಯ ಇಲಾಖೆಯ ಅಧಿಕಾರಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next