Advertisement

JDS ವಿರುದ್ಧ ಇಬ್ರಾಹಿಂ ದಾವೆ

10:54 PM Dec 21, 2023 | Team Udayavani |

ಬೆಂಗಳೂರು: ಜೆಡಿಎಸ್‌ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿರುವ ಉಚ್ಚಾಟಿತ ನಾಯಕ ಸಿ.ಎಂ ಇಬ್ರಾಹಿಂ ಅವರು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಮೇಲೆ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

Advertisement

ರಾಜ್ಯಾಧ್ಯಕ್ಷ ಸಹಿತ ರಾಜ್ಯ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಿ 2023ರ ಅ.19ರಂದು ತೆಗೆದುಕೊಂಡ ನಿರ್ಣಯ ಹಾಗೂ ಅದೇ ದಿನ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಹಂಗಾಮಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಹಾಗೂ ತಮ್ಮನ್ನು ಅಮಾನತುಗೊಳಿಸಿ ನ.16ರಂದು ಕೈಗೊಂಡ ನಿರ್ಣಯವನ್ನು ಸಿ.ಎಂ. ಇಬ್ರಾಹಿಂ ದಾವೆಯಲ್ಲಿ ಪ್ರಶ್ನಿಸಿದ್ದಾರೆ.
ಜೆಡಿಎಸ್‌ ಕೈಗೊಂಡ ಈ ಎಲ್ಲ ನಿರ್ಣಯಗಳು ಏಕಪಕ್ಷೀಯ ಹಾಗೂ ಕಾನೂನು ಬಾಹಿರವಾಗಿವೆ. ಪಕ್ಷದ ಸಂವಿಧಾನ ಮತ್ತು ಸಹಜ ನ್ಯಾಯ ತತ್ವಕ್ಕೆ ವಿರುದ್ಧವಾಗಿವೆ ಎಂದು ಇಬ್ರಾಹಿಂ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next