Advertisement
ಆತ್ಮೀಯ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರೆ ಸಿಎಂ ಇಬ್ರಾಹಿಂ ಅವರು ಇವತ್ತು ಮಾಧ್ಯಮಗಳ ಮುಂದೆ ಹೇಳಿಕೆಯನ್ನು ಕೊಡುವಾಗ ಹೇಳಿಕೆಯನ್ನು ನೀಡಿದ್ದು ಈ ಮೂಲಕ ನಾನು ಸಮಸ್ತ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಸ್ಪಷ್ಟಪಡಿಸುತ್ತಾ ಅವರ ಈ ಹೇಳಿಕೆಯನ್ನು ಅಲ್ಲಗಳೆಯುತ್ತಾ ಶ್ರೀಮಾನ್ ವೀರೇಂದ್ರ ಪಾಟೀಲ್ ಅವರ ಮನೆತನ ಕಳೆದ 5-6ದಶಕಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ಇದ್ದು ಕಾಂಗ್ರೆಸ್ ಪಕ್ಷವು ನಮ್ಮ ಪೂಜ್ಯ ತಂದೆಯವರಿಗೆ ಹಾಗೂ ನನಗೆ ತುಂಬಾ ಅವಕಾಶಗಳನ್ನು ಒದಗಿಸಿಕೊಟ್ಟಿದ್ದು, ಪಕ್ಷವು ನಮ್ಮ ಮನೆತನದೊಂದಿಗೆ ಸದಾ ಒಳ್ಳೆಯ ಸಂಬಂಧ ಹೊಂದಿದ್ದು ಕಾಂಗ್ರೆಸ್ ಪಕ್ಷವು ನಮ್ಮೊಂದಿಗೆ ಯಾವತ್ತೂ ತುಂಬಾ ಒಳ್ಳೆಯ ರೀತಿಯಲ್ಲಿ ನಡೆದುಕೊಂಡಿದೆ. ಕಾಂಗ್ರೆಸ್ ಪಕ್ಷವನ್ನು ಬಿಡುವಂತಹ ಪ್ರಶ್ನೆಯೇ ಇರುವುದಿಲ್ಲ ಎನ್ನುವುದನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.
–