Advertisement

ಉಪ ನೋಂದಣಿ ಕಚೇರಿಯಲ್ಲಿ ಗುರುತಿನ ಕಾರ್ಡ್‌ ಕಡ್ಡಾಯ: ಅಶೋಕ್‌

10:33 PM Jul 25, 2022 | Team Udayavani |

ಬೆಂಗಳೂರು: ರಾಜ್ಯದ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬಂದಿ ಕಡ್ಡಾಯವಾಗಿ ಗುರುತಿನ ಕಾರ್ಡ್‌ ಧರಿಸುವುದು ಸಹಿತ ಅಕ್ರಮ ತಡೆಗೆ ಹಲವು ಕಠಿನ ಕ್ರಮಗಳನ್ನು ಕೈಗೊಳ್ಳುವಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಉಪ ನೋಂದಣಿ ಕಚೇರಿಗಳ ಲೋಪಗಳ ಕುರಿತು ಲೋಕಾಯುಕ್ತ ಪೊಲೀಸರು ವರದಿ ನೀಡಿದ್ದಾರೆ. ಅನಧಿಕೃತ ವ್ಯಕ್ತಿಗಳು ಕಚೇರಿಯೊಳಗೆ ಇರುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸರ್ವರ್‌ ಸಮಸ್ಯೆ ಬಗ್ಗೆ ದೂರುಗಳಿವೆ. ಇದರ ನಿವಾರಣೆಗೆ 406 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next