Advertisement

ಕಂಡಲ್ಲಿ ಗುಂಡಿಕ್ಕಿ ಹೇಳಿಕೆಗೆ ಈಗಲೂ ಬದ್ಧವಾಗಿದ್ದೇನೆ: ಸುರೇಶ್‌ಅಂಗಡಿ

10:24 AM Dec 19, 2019 | sudhir |

ಬೆಳಗಾವಿ: ರೈಲ್ವೇ ಇಲಾಖೆ ಆಸ್ತಿಪಾಸ್ತಿ ನಾಶ ಮಾಡಿದರೆ ಕಂಡಲ್ಲಿ ಗುಂಡಿಕ್ಕಿ ಎಂಬ ಹೇಳಿಕೆಗೆ ಈಗಲೂ ಬದ್ಧವಾಗಿದ್ದೇನೆ ಎಂದು ರೈಲ್ವೇ ಖಾತೆ ಸಹಾಯಕ ಸಚಿವ ಸುರೇಶ್‌ ಅಂಗಡಿ ಸ್ಪಷ್ಟಪಡಿಸಿದರು. ಗೋಕಾಕ್‌ ತಾಲೂಕಿನ ಘಟಪ್ರಭಾದಲ್ಲಿ ಬುಧವಾರ ರೈಲು ಜೋಡು ಮಾರ್ಗ ಲೋಕಾರ್ಪಣೆಗೊಳಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಅಲ್ಪಸಂಖ್ಯಾಕರಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಕೆಲ ಅಲ್ಪಸಂಖ್ಯಾಕರನ್ನು ಬಳಸಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ.

Advertisement

ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡುವಂತೆ ವಿಪಕ್ಷ ನಾಯಕರು ಕುಮ್ಮಕ್ಕು ನೀಡುತ್ತಿದ್ದಾರೆ. ನಗರ ನಕ್ಸಲ್‌, ಬುದ್ಧಿಜೀವಿಗಳಿಂದ ದಾರಿ ತಪ್ಪಿಸುವ ಕೆಲಸ ನಡೆದಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವಾಗ ಸರಕಾರ ಮೂಕಪ್ರೇಕ್ಷಕರಾಗಿ ಕೂರಲು ಸಾಧ್ಯವಿಲ್ಲ. ನಿರ್ಭಯಾ ಪ್ರಕರಣದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಳಂಬವಾದರೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಾರ್ಹ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next