Advertisement

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

11:34 PM Apr 22, 2024 | Team Udayavani |

ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಧರ್ಮದ ಮಹಿಳೆಯರು ತಮ್ಮ ಗಂಡಂದಿರು ಮತ್ತು ಮಕ್ಕಳನ್ನು ಕಳೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಡಾ| ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶದಲ್ಲಿ ಕೋಮುಗಲಭೆ, ದೊಂಬಿ ಎಬ್ಬಿಸಿ ಪ್ರತಿ ನಾಗರಿಕರ ಮಕ್ಕಳು ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವಂತೆ ಮಾಡುತ್ತಾರೆ. ಮಕ್ಕಳಿಗೆ ಶಿಕ್ಷಣ, ಉದ್ಯೋಗ ನೀಡದೆ ಈ ರೀತಿಯ ಕೋಮುಗಲಭೆಯಲ್ಲಿ ತೊಡಗುವಂತೆ ಮಾಡಿ, ಅವರನ್ನು ಅಶಿಕ್ಷಿತ, ನಿರುದ್ಯೋಗಿಗಳನ್ನಾಗಿ ಮಾಡುತ್ತಾರೆ. ಆ ಮೂಲಕ ಸಮಾಜ ಅಧಃಪತನಕ್ಕೆ ಹೋಗುವಂತೆ ಮಾಡುತ್ತಾರೆ ಎಂದು ಆರೋಪಿಸಿದರು.

ಪ್ರಧಾನಿಗಳು ವೋಟ್‌ ಕೇಳುವ ಹೆಸರಿನಲ್ಲಿ ಅತ್ಯಂತ ತುತ್ಛ ಹಾಗೂ ಮತೀಯ ಭಾವನೆ ಕೆರಳಿಸುವಂತೆ ಮಾತನಾಡಿದ್ದಾರೆ. ಪ್ರಪಂಚದ ಯಾವುದೇ ಪ್ರಜಾಪ್ರಭುತ್ವದಲ್ಲೂ ಒಬ್ಬ ಪ್ರಧಾನಿ ಈ ರೀತಿಯಾಗಿ ಮಾತನಾಡುವುದಿಲ್ಲ. ಹೀಗಾಗಿ ಜನರು ಇಂತಹ ವಿಷಯಗಳಿಗೆ ಮನ್ನಣೆ ನೀಡದೆ, ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುವವರಿಗೆ ಬೆಂಬಲ ನೀಡಬೇಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next