Advertisement

ಬಿಜೆಪಿ ಗೆದ್ದರೆ ವಾರ್ಡ್‌ಗಳ ಅಭಿವೃದ್ಧಿಗೆ ಒತ್ತು

02:58 PM Apr 26, 2023 | Team Udayavani |

ಚಾಮರಾಜನಗರ: ಪಟ್ಟಣದ 31 ವಾರ್ಡ್‌ಗಳ ಅಭಿವೃದ್ಧಿಗೆ ವಿಶೇಷ ಯೋಜನೆ ತಂದು ಮತ್ತೂಂದು ಗೋವಿಂದರಾಜನಗರ ಮಾಡಲು ಮುಂದಾಗಿರುವ ಬಿಜೆಪಿ ಅಭ್ಯರ್ಥಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸೋಣ ಎಂದು ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ ನಟರಾಜು ಮನವಿ ಮಾಡಿದರು.

Advertisement

ನಗರದ 16, 17,18 ಹಾಗೂ 19ನೇ ವಾಡ್‌ ìಗಳಲ್ಲಿ ಚುನಾವಣಾ ಪ್ರಚಾರಕ್ಕೆ ಸಂತೇಮರಹಳ್ಳಿ ವೃತ್ತದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 15 ವರ್ಷಗಳಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್‌ ಶಾಸಕರು ಪಟ್ಟಣದ ಅಭಿವೃದ್ಧಿ ನಿರ್ಲಕ್ಷ್ಯ ವಹಿಸಿದ್ದಾರೆ. 15 ವರ್ಷಗಳಲ್ಲಿ ಅಧಿಕಾರ ಕೊಟ್ಟಿದ್ದೀರಿ. ಬಿಜೆಪಿಗೆ ಒಂದು ಬಾರಿ ಅವಕಾಶ ಕೊಡಿ. ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಬಗ್ಗೆ ಹೆಚ್ಚು ಕಾಳಜಿ ಹೊಂದಿರುವ ಸೋಮಣ್ಣ ಅವರು, ಕ್ಷೇತ್ರವನ್ನು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುತ್ತಾರೆ ಎಂದು ಮನವಿ ಮಾಡಿದರು.

ಬಿಜೆಪಿ ದಲಿತರ ಪರ: ಮಧ್ಯಪ್ರದೇಶ ಸಂಸದ, ಮಾಜಿ ಸಚಿವ ಬಿಜೆಪಿ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಲಾಲ್‌ಸಿಂಗ್‌ ಆರ್ಯ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ದಲಿತರ ಪರವಾಗಿದ್ದು, ಅಭಿವೃದ್ಧಿಯ ಬಗ್ಗೆ ಹೆಚ್ಚು ಒತ್ತು ನೀಡುತ್ತಿದೆ. ಬಿಜೆಪಿ ಸರ್ಕಾರ ಬಂದರೆ ಸಂವಿಧಾನ ಬದಲಾಯಿಸುತ್ತೇವೆ ಎಂಬ ಸುಳ್ಳು ಹೇಳಿಕೆ ನೀಡುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಡಬಲ್‌ ಎಂಜಿನ್‌ ಸರ್ಕಾರ ದಲಿತರ ಪರ ಯೋಜನೆಗಳನ್ನು ಜಾರಿ ಮಾಡಿ, ಅಭಿವೃದ್ಧಿಯತ್ತ ಸಾಗುತ್ತಿದೆ. ಮತ್ತೆ ಬಿಜೆಪಿ ಸರ್ಕಾರವನ್ನು ರಚನೆ ಮಾಡಲು ಮತ ನೀಡಬೇಕು ಎಂದು ಮನವಿ ಮಾಡಿದರು. ಬಳಿಕ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಮನೆ ಮನೆಗೆ ಕರಪತ್ರಗಳನ್ನು ಹಂಚುವ ಮೂಲಕ ಸೋಮಣ್ಣ ಪರ ಮತಯಾಚನೆ ಮಾಡಿದರು.

ಮುಖಂಡರಾದ ಅಮ್ಮನಪುರ ಮಲ್ಲೇಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್‌, ಕಾಡಾ ಅಧ್ಯಕ್ಷ ನಿಜಗುಣರಾಜು, ಕೂಡ್ಲೂರು ಹನುಮಂತಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷರಾದ ಮಹದೇವನಾಯಕ, ಸುರೇಶ್‌ನಾಯಕ, ಸದಸ್ಯರಾದ ಶಿವರಾಜು, ಮಂಜುನಾಥ್‌, ಗಾಯತ್ರಿ ಚಂದ್ರಶೇಖರ್‌, ಮಮತಾ ಬಾಲಸುಬ್ರಹ್ಮಣ್ಯ, ಕುಮುದಾ, ಶಿವಣ್ಣ, ನಟರಾಜು, ಬಸವರಾಜು, ಕೂಸಣ್ಣ, ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next