Advertisement

ಬಿಎಸ್‌ವೈಗೆ ಕಿರುಕುಳ ನೀಡಿದ್ರೆ ಸುಮ್ಮನಿರಲ್ಲ

11:00 PM Sep 08, 2019 | Lakshmi GovindaRaju |

ವಿಜಯಪುರ: ಅನರ್ಹ ಶಾಸಕರಿಂದಲೇ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರಿಗೆ ಬಿಜೆಪಿ ಅನ್ಯಾಯ ಮಾಡಲ್ಲ. ಇದಲ್ಲದೇ ಇನ್ನೂ ಹಲವು ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಶೀಘ್ರವೇ ಬಿಜೆಪಿಗೆ ಬರುತ್ತಾರೆ. ಇಂಥ ಸ್ಥಿತಿಯಲ್ಲಿ ಯಾರಾದರೂ ಸಿಎಂ ಯಡಿಯೂರಪ್ಪ ಅವರಿಗೆ ಕಿರುಕುಳ ನೀಡಿದರೆ ಸುಮ್ಮನಿರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನರ್ಹ ಶಾಸಕರು ರಾಜೀನಾಮೆ ನೀಡಿದ ನಂತರ ಸಾಕಷ್ಟು ನೊಂದಿದ್ದಾರೆ.

Advertisement

ರಾಜೀನಾಮೆ ಬಳಿಕ ಸಾಕಷ್ಟು ಚಿತ್ರ ಹಿಂಸೆ ಆಗಿದೆ. ಅನರ್ಹ ಶಾಸಕರು ಮಂತ್ರಿಗಳಾಗಲಿ ಎಂದು ಹಾರೈಸುತ್ತೇನೆ. ಇದಲ್ಲದೇ ಶೀಘ್ರವೇ ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಿಂದ ಇನ್ನೂ ಹಲವು ಶಾಸಕರು ಬಿಜೆಪಿಗೆ ಬರುತ್ತಾರೆ. ಯಾರಿಗೂ ಮಧ್ಯಂತರ ಚುನಾವಣೆ ಬೇಕಿಲ್ಲ. ಇಂಥ ಸ್ಥಿತಿಯಲ್ಲಿ ಯಡಿಯೂರಪ್ಪ ಅವರಿಗೆ ಎಲ್ಲ ಶಾಸಕರು ಸಹಕಾರ ನೀಡಬೇಕು. ಕಿರುಕುಳ ನೀಡಿದರೆ ಸುಮ್ಮನಿರುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next