Advertisement

Congress ಸೋತರೆ ಸಚಿವರ ತಲೆ ದಂಡ ಎನ್ನುವುದು ಸುಳ್ಳು: ಸತೀಶ್ ಜಾರಕಿಹೊಳಿ

04:30 PM Jan 20, 2024 | Team Udayavani |

ಬೆಳಗಾವಿ: ”ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಚಿವರ ತಲೆ ದಂಡವಾಗುತ್ತದೆ ಎನ್ನುವುದು ಸುಳ್ಳು” ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

Advertisement

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಅರ್ಜಿ ಹೈಕಮಾಂಡ್ ಗೆ ಸಲ್ಲಿಸಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 10 ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ 6 ಆಕಾಂಕ್ಷಿಗಳ ಅರ್ಜಿ ಸಲ್ಲಿಕೆಯಾಗಿವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಸಚಿವರಿಗೆ ಯಾವುದೇ ಮಾನದಂಡ ಇಲ್ಲ. ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಹೀಗಿರುವಾಗ ಸಚಿವರ ತಲೆದಂಡ ಎಂಬುದು ಸುಳ್ಳು. ಅಂತಹ ವಿಚಾರ ಪಕ್ಷದ ಹೈಕಮಾಂಡ್ ಮುಂದಿಲ್ಲ ಎಂದರು.

ಈಗಾಗಲೇ ಕಳೆದ ಆರು ತಿಂಗಳಿನಿಂದ ರಾಜ್ಯದ ಲೋಕಸಭಾ ಕ್ಷೇತ್ರದಲ್ಲಿ ಆಂತರಿಕ ಸಮೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next